ತ್ರಿಸ್ಸೂರ್: ಬೆತ್ತಲೆಯಾಗಿ ದೇವಸ್ಥಾನಕ್ಕೆ ನುಗ್ಗಿದ ವ್ಯಕ್ತಿಯೊಬ್ಬ ಮೂಲಸ್ಥಾನದಲ್ಲಿದ್ದ ಪ್ರಮುಖ ದೇವರ ಮೂರ್ತಿಯನ್ನು ಧ್ವಂಸ ಮಾಡಿರುವ ಘಟನೆ ಕೇರಳದ ಕೊಡುಂಗಲ್ಲೂರಿನಲ್ಲಿರುವ ಶ್ರೀ ಕುರುಂಬಾ ಭಗವತಿ ದೇವಸ್ಥಾನದಲ್ಲಿ ನಡೆದಿದೆ.
ಈ ಘಟನೆ ಇಂದು ಬೆಳಗ್ಗೆ 4.30 ಸುಮಾರಿಗೆ ನಡೆದಿದೆ. ಮೂಲಗಳ ಪ್ರಕಾರ ಆರೋಪಿಯು ಮಾನಸಿಕ ಅಸ್ವಸ್ಥ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಶಂಕಿತನನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ತನಿಖೆ ಮುಂದುವರಿದಿದೆ.
ಈ ಘಟನೆಯನ್ನು ಖಂಡಿಸಿರುವ ಹಿಂದು ಐಕ್ಯ ವೇದಿ ಹೆಸರಿನ ಹಿಂದು ಸಂಘಟನೆ, ತಾಲೂಕಿನ ಮಟ್ಟದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು, ಆರೋಪಿ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ. (ಏಜೆನ್ಸೀಸ್)
ಸಿದ್ದರಾಮಯ್ಯನವರ ಸರ್ಟಿಫಿಕೇಟ್ ಅಗತ್ಯವಿಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ ವ್ಯಂಗ್ಯ
1959ರಲ್ಲಿ 10 ಗ್ರಾಂ ಚಿನ್ನದ ಬೆಲೆ ಎಷ್ಟಿತ್ತು ಗೊತ್ತಾ? ಹಳೆಯ ಬಿಲ್ ನೋಡಿದ್ರೆ ನಿಮ್ಮ ಹುಬ್ಬೇರೋದು ಗ್ಯಾರೆಂಟಿ!