More

    ಸಿಎಂ ಬದಲಾವಣೆ ಮಾಹಿತಿ ಇಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹೇಳಿಕೆ

    ಉಡುಪಿ/ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷನಾಗಿ ಸಿಎಂ ಬದಲಾವಣೆ ಬಗ್ಗೆ ಇವತ್ತಿನವರೆಗೆ ನನಗೆ ಮಾಹಿತಿ ಇಲ್ಲ. ಮಾಧ್ಯಮ ಗಳಿಂದ ಈ ವಿಚಾರ ತಿಳಿದುಕೊಂಡಿದ್ದೇನೆ. ಯಡಿಯೂರಪ್ಪನವರೇ ರಾಜ್ಯದ ಟ್ರ್ಯಾಕ್ಟರ್ ಮುನ್ನಡೆಸುತ್ತಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

    ಪರ್ಕಳದಲ್ಲಿ ಕೃಷಿ ನಾಟಿ ಕಾರ್ಯಕ್ಕೆ ಭಾನುವಾರ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರವಾಹ ಉಂಟಾಗಿರುವುದರಿಂದ ಮುಖ್ಯಮಂತ್ರಿ ಸೂಚನೆಯಂತೆ ಎಲ್ಲರೂ ಆಯಾ ಜಿಲ್ಲೆಯಲ್ಲಿದ್ದು ನೆರೆ ಪರಿಹಾರದ ಕೆಲಸ ಮಾಡುತ್ತಿದ್ದಾರೆ. ಸಿಎಂ ವೈಮಾನಿಕ ಸಮೀಕ್ಷೆ ನಡೆಸುತ್ತಿದ್ದಾರೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಸಾಂತ್ವನ ಹೇಳುತ್ತಿದ್ದಾರೆ ಎಂದರು.

    ಸಿದ್ದರಾಮಯ್ಯ ಅಹಿಂದ ಹೋರಾಟ ಮಾಡಿ ಅಧಿಕಾರಕ್ಕೆ ಬಂದವರು. ಮುಖ್ಯಮಂತ್ರಿಯಾದ ಬಳಿಕ ಅಹಿಂದ ಮರೆತರು. ಹಿಂದುಳಿದ ವರ್ಗಕ್ಕೆ ಯಾವ ಕೊಡುಗೆಯನ್ನೂ ಅವರು ನೀಡಿಲ್ಲ. ಕಾಂಗ್ರೆಸ್‌ನಲ್ಲಿ ಜಿ.ಪರಮೇಶ್ವರ್ ಅವರನ್ನು ಮೂಲೆಗುಂಪು ಮಾಡಿದ್ದಾರೆ ಎಂದರು.

    ಹೈಕಮಾಂಡ್ ಸಂದೇಶ ಮಾಹಿತಿ ಇಲ್ಲ: ಇನ್ನೊಂದೆಡೆ ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್‌ನಿಂದ ಸಂದೇಶ ಬಂದ ಬಳಿಕ ಮುಂದಿನ ನಿರ್ಧಾರ ಎಂದು ಮುಖ್ಯಮಂತ್ರಿ ಹೇಳಿಕೆ ಬಗ್ಗೆ ಮಾಹಿತಿ ಇಲ್ಲ. ಅವರು ಯಾವ ಅರ್ಥದಲ್ಲಿ ಹೇಳಿದ್ದಾರೆ ಗೊತ್ತಿಲ್ಲ ಎಂದರು. ಬಿಎಸ್‌ವೈ ಎರಡು ವರ್ಷ ಪೂರೈಸಿದ್ದಾರೆ. ಒಂದೆಡೆ ನೆರೆ, ಬರ, ಕೋವಿಡ್ ಇದ್ದರೂ ಚೆನ್ನಾಗಿ ಕಾರ್ಯಗಳನ್ನು ನಿಭಾಯಿಸಿದ್ದಾರೆ. ಎರಡು ವರ್ಷ ಅಭೂತಪೂರ್ವ ಸಾಧನೆ ಆಗಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts