More

    ಮೃಗಾಲಯದಲ್ಲಿ ನಾಮಕರಣ ಸಂಭ್ರಮ

    ಶ್ರೀ ಚಾಮರಾಜೇಂದ್ರ ಮೃಗಾಲಯದ ‘ರಾಜು’ ಮತ್ತು ‘ನಿರ್ಭಯಾ’ ಜೋಡಿಗೆ ಜನಿಸಿದ ಮೂರು ಸಿಂಹದ ಮರಿಗಳಿಗೆ ಭಾನುವಾರ ಅರಣ್ಯ ಸಚಿವ ಈಶ್ವರ ಖಂಡ್ರೆ ನಾಮಕರಣ ಶಾಸ ನೆರವೇರಿಸಿದರು. ಮೃಗಾಲಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹೆಣ್ಣು ಸಿಂಹದ ಮರಿಗೆ ‘ಕಬಿನಿ’ ಹಾಗೂ ಎರಡು ಗಂಡು ಸಿಂಹದ ಮರಿಗಳಿಗೆ ‘ಸೂರ್ಯ’ ಹಾಗೂ ‘ಚಂದ್ರ’ ಎಂಬ ಹೆಸರಿಟ್ಟರು.

    ಮೊದಲ ಬಾರಿಗೆ ಮೃಗಾಲಯಕ್ಕೆ ಭೇಟಿ ನೀಡುತ್ತಿರುವುದು ಸಂತಸ ತಂದಿದೆ. ಕೀಟಗಳು, ಪಕ್ಷಿಗಳು ಹಾಗೂ ಪ್ರಾಣಿಗಳನ್ನು ಒಳಗೊಂಡಂತೆ ಎಲ್ಲ ಜೀವಿಗಳಿಗೂ ಭೂಮಿ ಮೇಲೆ ಬದುಕುವ ಹಕ್ಕಿದೆ. ಮೃಗಾಲಯದಲ್ಲಿ ಎಲ್ಲ ಪ್ರಾಣಿಗಳನ್ನು ಇಲ್ಲಿನ ಸಿಬ್ಬಂದಿ ಚೆನ್ನಾಗಿ ಪೋಷಿಸುತ್ತಿದ್ದಾರೆ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

    ಮುಂದಿನ ದಿನಗಳಲ್ಲಿ ಈ ಮೃಗಾಲಯ ಅಭಿವೃದ್ಧಿಪಡಿಸಲು ಹಾಗೂ ಭಾರತದಲ್ಲೇ ಉತ್ತಮ ಮೃಗಾಲಯವನ್ನಾಗಿಸಲು ಅಗತ್ಯ ಕ್ರಮಕ್ಕೆ ಸೂಚಿಸುತ್ತೇನೆ ಎಂದರು.

    ಮುಂಬರುವ ದಸರಾ ಮಹೋತ್ಸವಕ್ಕೆ ಇಲಾಖೆಯಿಂದ ನೀಡಬಹುದಾದ ಸೌಲಭ್ಯಗಳನ್ನು ಸಮರ್ಪಕವಾಗಿ ಪೂರೈಸಲಾಗುವುದು. ಇದಕ್ಕಾಗಿ ಪೂರ್ವಸಿದ್ಧತೆಗಳು ನಡೆಯುತ್ತಿವೆ. ಈ ಕುರಿತು ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.

    ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಜಿ.ವಿ.ರಂಗರಾವ್, ಬೆಂಗಳೂರು ವನ್ಯಜೀವಿ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕುಮಾರ್ ಪುಷ್ಕರ್, ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಡಿ.ಮಹೇಶ್ ಕುಮಾರ್, ಉಪ ನಿರ್ದೇಶಕಿ ಎ.ಜೆ.ರೋಷಿಣಿ, ಸಹಾಯಕ ನಿರ್ದೇಶಕ ಡಾ.ಜೆ.ಎಲ್.ಶ್ರೀನಿವಾಸ್ ಇದ್ದರು.

    ಮನುಷ್ಯನ ಜೀವ ಅತ್ಯಮೂಲ್ಯವಾಗಿದ್ದು, ಆನೆ ಹಾಗೂ ಚಿರತೆ ದಾಳಿ ತಪ್ಪಿಸಲು ರಾಜ್ಯ ಸರ್ಕಾರ ಹಲವಾರು ಕ್ರಮ ಕೈಗೊಂಡಿದೆ. ಇದಕ್ಕಾಗಿ ರೈಲ್ವೆ ಬ್ಯಾರಿಕೇಡ್ ನಿರ್ಮಿಸಲು ಯೋಜನೆ ರೂಪಿಸಲಾಗಿದ್ದು, 120 ಕೋಟಿ ರೂ. ಅನುದಾನ ಕೋರಿ ಸಲ್ಲಿಸಿರುವ ಪ್ರಸ್ತಾವನೆಗೆ ಮುಖ್ಯಮಂತ್ರಿ ಅನುಮೋದನೆ ನೀಡಿದ್ದಾರೆ.
    ಈಶ್ವರ ಖಂಡ್ರೆ ಅರಣ್ಯ ಸಚಿವ

    • ಫೋಟೋ ಕಳಿಸಲಾಗುವುದು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts