ಲಕ್ಕೂರು: ಶಾಸಕ ಕೆ.ವೈ.ನಂಜೇಗೌಡರು ಹಗರಣಗಳಲ್ಲಿ ಸಿಲುಕಿ ತಾಲೂಕಿನ ಅಭಿವೃದ್ಧಿಯನ್ನು ಮರೆತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಹೇಳಿದರು.
ಚಿಕ್ಕತಿರುಪತಿ ಗ್ರಾಪಂ ವ್ಯಾಪ್ತಿಯ ಅಂಚೆಮುಸ್ಕೂರು ಗ್ರಾಮದಲ್ಲಿ ಮಾಜಿ ಶಾಸಕ ಕೆ.ಎಸ್.ಮಂಜುನಾಥ್ಗೌಡ ಅಭಿಮಾನಿ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಚಿಕ್ಕತಿರುಪತಿ ಗ್ರಾಪಂ ವ್ಯಾಪ್ತಿಯ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಮಾಜಿ ಶಾಸಕ ಕೆ.ಎಸ್.ಮಂಜುನಾಥ್ಗೌಡರು ಉತ್ತಮ ವ್ಯಕ್ತಿಯಾಗಿದ್ದು, ಜನ ಸೇವೆ ಹಾಗೂ ಜನರಿಗೋಸ್ಕರ ಬದುಕುವ ವ್ಯಕ್ತಿ. ತಾಲೂಕಿನ 28 ಗ್ರಾಪಂಗಳಲ್ಲಿ ಕಾರ್ಯಕರ್ತರ ಸಭೆಗಳನ್ನು ಏರ್ಪಡಿಸಲಾಗುವುದು ಎಂದರು.
ಸಂಸದ ಎಸ್.ಮುನಿಸ್ವಾಮಿ ಮಾತನಾಡಿ, ಮಾಜಿ ಶಾಸಕ ಕೆ.ಎಸ್.ಮಂಜುನಾಥ್ಗೌಡರನ್ನು ಶಾಸಕರನ್ನಾಗಿ ಮಾಡುತ್ತೇವೆ ಎಂದು ಹೇಳಿ ಪಕ್ಷಕ್ಕೆ ಕರೆದುಕೊಂಡು ಬಂದಿರುವುದು. ಅದನ್ನು ಹೈಕಮಾಂಡ್ ತಿಮಾರ್ನ ಮಾಡಿದೆ. ನಿಮಗೆ ಯಾವುದೇ ರೀತಿಯ ಅಪನಂಬಿಕೆ ಬೇಡ. ತಾಲೂಕಿನಲ್ಲಿ ಮಣ್ಣು, ಕಲ್ಲು, ನೀರು, ಹಾಲು, ಬೆಣ್ಣೆ, ತುಪ್ಪ, ಸರ್ಕಾರಿ ಜಮೀನು ಎಲ್ಲದರಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ಇದನ್ನು ಹೋಗಲಾಡಿಸಲು ಕಾರ್ಯಕರ್ತರು ಪಣ ತೊಡಬೇಕು ಎಂದು ಹೇಳಿದರು.
ಮಾಜಿ ಶಾಸಕ ಕೆ.ಎಸ್.ಮಂಜುನಾಥ್ಗೌಡ ಮಾತನಾಡಿ, ರಾಜಕಾರಣಿಗಳು ಸರ್ಕಾರಿ ಅಧಿಕಾರಿಗಳ ಬಳಿ ಲಂಚಕ್ಕಾಗಿ ಬೇಡಿಕೆ ಇಟ್ಟರೆ ಗೌರವ ಸಿಗುವುದಿಲ್ಲ. ಬಿಜೆಪಿಯಲ್ಲಿ ಶಿಸ್ತಿನಿಂದ ಕಾರ್ಯನಿರ್ವಹಿಸಬೇಕು. ಈ ನಿಟ್ಟಿನಲ್ಲಿ ತಾಲೂಕಿನ ಪ್ರತಿಯೊಂದು ಗ್ರಾಪಂ ಮಟ್ಟದಲ್ಲಿ ಕಾರ್ಯಕರ್ತರ ಸಭೆ ನಡೆಸಲಾಗುವುದು ಎಂದರು.
ಅಭಿಮಾನಿಗಳು ಸಚಿವ ಮುನಿರತ್ನಗೆ ಕ್ರೇನ್ ಮೂಲಕ ಸೇಬಿನ ಹಾರ ಹಾಕಿದರು. ಡಿ.ಎನ್.ದೊಡ್ಡಿ ಗ್ರಾಪಂ ಅಧ್ಯಕ್ಷ ಚಿಕ್ಕತಿಮ್ಮರಾಯಪ್ಪ, ಪಡುವನಹಳ್ಳಿ ಗ್ರಾಪಂ ಸದಸ್ಯರಾದ ಶ್ರೀನಿವಾಸ್, ಬೂತಪ್ಪ ಬಿಜೆಪಿಗೆ ಸೇರ್ಪಡೆಯಾದರು.
ಬಿಬಿಎಂಪಿ ಸದಸ್ಯ ಮಂಜುನಾಥ್, ಶಿಡ್ಲಘಟ್ಟದ ಮಾಜಿ ಶಾಸಕ ರಾಜಣ್ಣ, ಜಿಪಂ ಮಾಜಿ ಸದಸ್ಯ ಚಿನ್ನಸ್ವಾಮಿಗೌಡ, ಗ್ರಾಪಂ ಸದಸ್ಯರಾದ ಸಂಪಂಗೆರೆ ರಘು, ಪ್ರೇಮ್ಕುಮಾರ್, ಗ್ರಾಪಂ ಮಾಜಿ ಉಪಾಧ್ಯಕ್ಷ ವೆಂಕಟರಮಣಪ್ಪ, ಮಾಜಿ ಸದಸ್ಯರಾದ ಸಂಪಂಗೆರೆ ಬಾಲಕೃಷ್ಣ, ಬಾಬು, ಮುಖಂಡರಾದ ಅಗ್ರಿ ನಾರಾಯಣಪ್ಪ, ಎ.ಎನ್.ಬಸಪ್ಪ, ಟಿ.ಆರ್.ವೆಂಕಟೇಶ್ಗೌಡ, ಮರಿರಾಜು, ವೇಣು, ಬೆಳ್ಳಾವಿ ಸೋಮಣ್ಣ, ಅಮುದಾ ವೇಣು, ಪದ್ಮಾವತಿ, ಚಂದ್ರು, ರಘು ಇತರರು ಇದ್ದರು.