More

    ನಾರಾಯಣಪುರ ಶೂಟೌಟ್; ಸಿಐಡಿ ತನಿಖೆಗೆ ಒಪ್ಪಿದ ಸರ್ಕಾರ

    ಬೆಂಗಳೂರು: ವಿರೋಧ ಪಕ್ಷವಾದ ಬಿಜೆಪಿ ಆಗ್ರಹಕ್ಕೆ ಮಣಿದ ಸರ್ಕಾರ, ಕಲಬುರಗಿ ಜಿಲ್ಲೆ ಜೇವರ್ಗಿ ತಾಲ್ಲೂಕು ನಾರಾಯಣಪುರ ಪೊಲೀಸ್ ಶೂಟೌಟ್ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದೆ.

    ಸದನ ಪ್ರಾರಂಭವಾಗುತ್ತಿದ್ದಂತೆಯೇ ಸಭಾಪತಿಗಳ ಪೀಠದ ಮುಂದೆ ಜಮಾಯಿಸಿದ ಬಿಜೆಪಿ ಸದಸ್ಯರು ನಾರಾಯಣಪುರ ಘಟನೆಯನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿತು.

    ಗೃಹ ಸಚಿವ ಜಿ.ಪರಮೇಶ್ವರ ಅವರು ವಿಧಾನ ಪರಿಷತ್‌ನಲ್ಲಿ ಸಿಐಡಿಗೆ ಒಪ್ಪಿಸುತ್ತಿರುವ ವಿಷಯವನ್ನು ಅಧಿಕೃತವಾಗಿ ಪ್ರಕಟಿಸಿದ ಬೆನ್ನಲ್ಲಿಯೇ ಬಿಜೆಪಿ ಪ್ರತಿಭಟನೆಯನ್ನು ಕೊನೆಗೊಳಿಸಿತು.

    ಜೇವರ್ಗಿ ತಾಲ್ಲೂಕು ನಾರಾಯಣಪುರ ಸಾಯಿಬಣ್ಣ ಕರ್ಜಗಿ ಶೂಟೌಟ್ ಪ್ರಕರಣವನ್ನು ನ್ಯಾಯಾಂಗ ತನಿಖೆಗೊಳಪಡಿಸುವಂತೆ ಒತ್ತಾಯಿಸಿ ಬಿಜೆಪಿ ಸದನದಲ್ಲಿ ಪ್ರತಿಭಟನೆ ನಡೆಸುತಿತ್ತು. ನ್ಯಾಯಾಂಗ ತನಿಖೆಗೊಳಪಡಿಸಲು ನಿರಾಕರಿಸಿದ್ದ ಗೃಹ ಸಚಿವ ಪರಮೇಶ್ವರ್ ಇಂದು ತಮ್ಮ ನಿಲುವು ಬದಲಿಸಿ, ಈ ಪ್ರಕರಣದ ಸತ್ಯಾಸತ್ಯತೆ ತಿಳಿಯಲು ಸಿಐಡಿಗೆ ತನಿಖೆಗೊಳಪಡಿಸುತ್ತೇನೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts