ಗುವಾಹಟಿ: ಕಾಂಗ್ರೆಸ್ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅವಧಿ ಆಗಸ್ಟ್ 10ಕ್ಕೆ ಮುಗಿದಿದ್ದರೂ, ಬೇರೆ ನಾಯಕನನ್ನು ಇನ್ನೂ ಆಯ್ಕೆ ಮಾಡದ ಕಾರಣ ಅವರಿನ್ನೂ ಮುಂದುವರಿಯುತ್ತಿದ್ದಾರೆ. ಆದರೆ ಇಂದು ಸೋನಿಯಾ ಗಾಂಧಿಯವರು ಕಾಂಗ್ರೆಸ್ ಮುಖಂಡರಿಗೆ ಪತ್ರ ಬರೆದಿದ್ದು, ಶೀಘ್ರವೇ ಪಕ್ಷಕ್ಕೆ ಹೊಸ ನಾಯಕನ್ನು ಆಯ್ಕೆ ಮಾಡಿ ಎಂದು ಹೇಳಿದ್ದಾರೆ.
ಈ ಮಧ್ಯೆ ರಾಹುಲ್ ಗಾಂಧಿಯವರನ್ನೇ ಮತ್ತೆ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಬೇಕು ಎಂಬ ಕೂಗು ಬಲವಾಗಿ ಕೇಳಿಬರುತ್ತಿದೆ. ಆಸ್ಸಾಂ ಕಾಂಗ್ರೆಸ್ ಅಧ್ಯಕ್ಷ ರಿಪುನ್ ಬೋರಾ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುತ್ತ, ರಾಹುಲ್ ಗಾಂಧಿಯವರನ್ನೇ ಕಾಂಗ್ರೆಸ್ ಅಧ್ಯಕ್ಷನನ್ನಾಗಿ ನೇಮಕ ಮಾಡಬೇಕು. ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ರಾಹುಲ್ ಗಾಂಧಿ ಅವರೊಬ್ಬರಿಗೇ ಮಾತ್ರ ಭಯ ಪಡುತ್ತಾರೆ. ನಾನು ಈ ಬಗ್ಗೆ ಕಳೆದ ವಿಡಿಯೋ ಕಾನ್ಫರೆನ್ಸ್ನಲ್ಲಿ ಸೋನಿಯಾ ಗಾಂಧಿ ಹಾಗೂ ರಾಜ್ಯಸಭಾ ಸದಸ್ಯರಿಗೆ ಹೇಳಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ‘ಮನಸು ಭಾರವಾದಾಗ ಹಾರುವುದೆಂತೋ … ಸುಚೇತನ್ ಕಂಠಸಿರಿಯಲ್ಲಿ ಮನಸಿನ ಹಾಡು
ರಾಹುಲ್ ಗಾಂಧಿಯವರು ಮಾತ್ರ ಬಿಜೆಪಿ, ಆರ್ಎಸ್ಎಸ್ ವಿರುದ್ಧ ನೇರವಾಗಿ ಹೋರಾಟ ಮಾಡುತ್ತಾರೆ. ಹಾಗೇ ಕಾಂಗ್ರೆಸ್ನ್ನು ಸಮರ್ಥವಾಗಿ ಮುನ್ನಡೆಸುತ್ತಾರೆ ಎಂದು ರಿಪುನ್ ಬೋರಾ ಸೋನಿಯಾ ಗಾಂಧಿಯವರಿಗೆ ಪತ್ರವನ್ನೂ ಬರೆದಿದ್ದಾಗಿ ತಿಳಿಸಿದ್ದಾರೆ. (ಏಜೆನ್ಸೀಸ್)
ಪ್ರಾಯೋಗಿಕ ಮೆಟ್ರೋ ರೈಲು ಸಂಚಾರಕ್ಕೆ ಅನುಮತಿ ನೀಡಿ; ಕೇಂದ್ರ ಸರ್ಕಾರ ಮನವಿ ಸಲ್ಲಿಸಿದ್ಯಾರು?