ಹೈದರಾಬಾದ್: ಟಾಲಿವುಡ್ ನಟ ನರೇಶ್ ಮತ್ತು ನಟಿ ಪವಿತ್ರಾ ಲೋಕೇಶ್ ನಡುವೆ ಲವ್ವಿಡವ್ವಿ ಇರುವುದು ಎಲ್ಲರಿಗೂ ತಿಳಿದಿರುವ ಸಂಗತಿ. ಶೀಘ್ರದಲ್ಲೇ ಮದುವೆ ಆಗುವುದಾಗಿ ಹೊಸ ವರ್ಷದ ಸಂದರ್ಭದಲ್ಲಿ ವಿಡಿಯೋ ಮೂಲಕ ಇಬ್ಬರು ಅಧಿಕೃತವಾಗಿ ಘೋಷಣೆ ಮಾಡಿದ್ದರು. ವಿಡಿಯೋದಲ್ಲಿ ನರೇಶ್ ಮತ್ತು ಪವಿತ್ರಾ ಪರಸ್ಪರ ಚುಂಬಿಸುವ ದೃಶ್ಯವಿತ್ತು. ಸದ್ಯ ಇಬ್ಬರು ಸಂಬಂಧದಲ್ಲಿದ್ದು, ಒಂದೇ ಸೂರಿನಡಿ ವಾಸಿಸುತ್ತಿದ್ದಾರೆ ಎಂದು ಹೇಳಲಾಗಿದೆ. ಇದರ ನಡುವೆಯೇ ನರೇಶ್ ಅವರು ತಮ್ಮ ಮೂರನೇ ಪತ್ನಿ ರಮ್ಯಾ ರಘುಪತಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ನನ್ನ ಹಣ ಮತ್ತು ಆಸ್ತಿಯನ್ನು ಕಬಳಿಸುವುದಕ್ಕಾಗಿ ನನ್ನನ್ನು ಕೊಲ್ಲಲು ರಮ್ಯಾ, ಸಂಚು ರೂಪಿಸುತ್ತಿದ್ದಾಳೆ. ಹೀಗಾಗಿ ನನಗೆ ರಕ್ಷಣೆ ಬೇಕು ಅಂತಾ ನರೇಶ್, ಕೋರ್ಟ್ ಮೆಟ್ಟಿಲೇರಿದ್ದಾರೆ. ಅಲ್ಲದೆ, ರಮ್ಯಾ ಜೊತೆಗಿನ ತನ್ನ ಮದುವೆಯನ್ನು ರದ್ದು ಮಾಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ರಮ್ಯಾ ಅವರು ಸುಪಾರಿ ಗ್ಯಾಂಗ್ ನೇಮಿಸಿದ್ದು, ಕಳೆದ ವರ್ಷ ನನ್ನ ಮನೆಯಲ್ಲಿ ಗ್ಯಾಂಗ್ ಕಣ್ಗಾವಲು ನಡೆಸಿತ್ತು. ನನ್ನನ್ನು ಕೊಲೆ ಮಾಡಲೆಂದೆ ಗ್ಯಾಂಗ್ ಅನ್ನು ನೇಮಿಸಿದ್ದಾಳೆ ಎಂದು ನ್ಯಾಯಾಲಯದ ಅರ್ಜಿಯಲ್ಲಿ ನರೇಶ್ ಆರೋಪ ಮಾಡಿದ್ದಾರೆ.
ಈಗಾಗಲೇ ಪತ್ನಿ ಇದ್ದು ಡಿವೋರ್ಸ್ ಆಗದೇ ಇರುವುದರಿಂದ ನರೇಶ್ ಅವರು ಪವಿತ್ರಾರನ್ನು ಕಾನೂನುಬದ್ಧವಾಗಿ ಮದುವೆ ಆಗಲು ಸಾಧ್ಯವಿಲ್ಲ ಎಂದು ರಮ್ಯಾ ಹೇಳಿದ್ದಾರೆ. ಇನ್ನೊಂದೆಡೆ ರಾಜಿಯಾಗಲು ರಮ್ಯಾ ಅವರು 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದರು ಎಂದು ನರೇಶ್ ಆರೋಪಿಸಿದ್ದಾರೆ.
ಅಂದಹಾಗೆ ತೆಲುಗು ಚಿತ್ರರಂಗದಲ್ಲಿ ಪೋಷಕ ನಟ ನರೇಶ್ ಹಾಗೂ ಕನ್ನಡ, ತೆಲುಗು ಚಿತ್ರಗಳಲ್ಲಿ ಪೋಷಕ ನಟಿ ಪವಿತ್ರಾ ಲೋಕೇಶ್ ನಡುವೆ ಸಂಬಂಧ ಇರುವುದಾಗಿ ನರೇಶ್ ಮೂರನೇ ಪತ್ನಿ ರಮ್ಯಾ ರಘುಪತಿ, ಮಾಧ್ಯಮಗಳ ಮುಂದೆ ಬಂದಾಗ ಪ್ರಕರಣ ಬೆಳಕಿಗೆ ಬಂದಿತು. ತಮಗೆ ಪತಿಯಿಂದ ಅನ್ಯಾಯವಾಗಿದ್ದು, ನ್ಯಾಯ ಕೊಡಿಸಬೇಕೆಂದು ರಮ್ಯಾ ಬೇಡಿಕೆ ಇಟ್ಟಿದ್ದರು. ಇದಕ್ಕೆ ಪುಷ್ಟಿ ಕೊಡುವಂತೆ ನರೇಶ್ ಹಾಗೂ ಪವಿತ್ರಾ ಹೋಟೆಲ್ನಲ್ಲಿ ಒಂದೇ ರೂಮಿನಲ್ಲಿ ನೆಲೆಸಿದ್ದರು. ಇಷ್ಟೆಲ್ಲಾ ನಡೆದ ಮೇಲೂ ಪವಿತ್ರಾ ಲೋಕೇಶ್ ಮಾತ್ರ ತಮ್ಮ ಹಾಗೂ ನರೇಶ್ ನಡುವಿನ ಸಂಬಂಧದ ಬಗ್ಗೆ ಯಾವುದೇ ಮಾಹಿತಿ ಬಿಚ್ಚಿಟ್ಟಿರಲಿಲ್ಲ. ನರೇಶ್ ಕೇವಲ ತನಗೆ ಒಬ್ಬ ಒಳ್ಳೆಯ ಗೆಳೆಯ ಎಂದೇ ವಾದಿಸಿದ್ದರು.
ಆದರೆ ನರೇಶ್ 2023ರ ಹೊಸ ವರ್ಷಕ್ಕೆ ಹೊಸ ಸುದ್ದಿ ಎಂಬಂತೆ ವಿಡಿಯೋವೊಂದನ್ನು ಬಿಡುಗಡೆ ಮಾಡಿದರು. ವಿಡಿಯೋದಲ್ಲಿ ನರೇಶ್ ಕ್ಯಾಂಡಲ್ ಲೈಟ್ನಲ್ಲಿ ಪವಿತ್ರಾ ಲೋಕೇಶ್ ಅವರೊಂದಿಗೆ ಕೇಕ್ ಕತ್ತರಿಸಿ, ಪರಸ್ಪರ ತಿನ್ನಿಸಿದ್ದಾರೆ. ನಂತರ ಇಬ್ಬರೂ ಒಬ್ಬರಿಗೊಬ್ಬರು ಪರಸ್ಪರ ಚುಂಬಿಸಿದ್ದಾರೆ. 2023ರ ಹೊಸ ವರ್ಷಕ್ಕೆ ಶುಭಾಶಯ ಕೋರುತ್ತಾ, ಈ ಹೊಸ ವರ್ಷಕ್ಕೆ ನಿಮ್ಮೆಲ್ಲರ ಹಾರೈಕೆ ಬೇಕು. ಸದ್ಯದಲ್ಲೇ ನಾವಿಬ್ಬರೂ ಮದುವೆಯಾಗಲಿದ್ದೇವೆ ಎಂದು ಪವಿತ್ರಾ ಲೋಕೇಶ್ರೊಂದಿಗಿನ ಸಂಬಂಧಕ್ಕೆ ಮುದ್ರೆ ಒತ್ತಿದರು. (ಏಜೆನ್ಸೀಸ್)
ನರೇಶ್-ಪವಿತ್ರಾ ಲೋಕೇಶ್ ಮದುವೆ ಹಿಂದಿರುವ ಅಸಲಿ ಕಾರಣ ಬಿಚ್ಚಿಟ್ಟ ಟಾಲಿವುಡ್ನ ಹಿರಿಯ ನಿರ್ಮಾಪಕ!
ಸರ್ಕಾರದಿಂದ ರೈತರಿಗೆ ಹಲವು ಜನಪ್ರಿಯ ಯೋಜನೆಗಳು ಜಾರಿ: ಸಚಿವ ಆರ್.ಅಶೋಕ್ ಹೇಳಿಕೆ
ಗರ್ಲ್ಫ್ರೆಂಡ್ ಜೊತೆ ಸಾರ್ವಜನಿಕವಾಗಿ ಕಿತ್ತಾಡಿಕೊಂಡ ಮೈಕೆಲ್ ಕ್ಲಾರ್ಕ್ಗೆ ಶಾಕ್ ಕೊಟ್ಟ ಬಿಸಿಸಿಐ!