ಧಾರವಾಡ: ರಾಷ್ಟ್ರೀಯ ಮಕ್ಕಳ ಪ್ರತಿಭಾ ಕೇಂದ್ರದ ಜಿಲ್ಲಾಧ್ಯಕ್ಷ ಹಾಗೂ ನಾದ ಝೇಂಕಾರ ಸಾಂಸ್ಕೃತಿಕ ಸಂಘದ ಯಮನಪ್ಪ ಜಾಲಗಾರ ಅವರ ಸಾಂಸ್ಕೃತಿಕ ಮತ್ತು ಮಕ್ಕಳ ಕ್ಷೇತ್ರದ ಸೇವೆ ಗುರುತಿಸಿ ಧಾರವಾಡ ನ್ಯೂಸ್ ಸಮೂಹ ಸಂಸ್ಥೆಗಳಿ೦ದ ಕೊಡಮಾಡುವ ಭಾರತರತ್ನ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಡಿ. 30ರಂದು ನಗರದ ರಂಗಾಯಣ ಸಾಂಸ್ಕೃತಿಕ ಸಮುಚ್ಚಯ ಭವನದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.