ಹಾಸನ: ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ದರೋಡೆಕೋರರ ಹಾವಳಿ ಹೆಚ್ಚಾಗಿದ್ದು, ದರೋಡೆ ಪ್ರಕರಣಗಳು ಎಗ್ಗಿಲ್ಲದೇ ಸಾಗಿದ್ದು, ಆಗ್ಗಾಗ್ಗೆ ಜನರ ಮೇಲೆ ನಡೆಯುತ್ತಿರುವ ಹಲ್ಲೆ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿವೆ.
ಎನ್ಎಚ್75 ಬುರಡಾಳ್ ಬಾರೆ ಬಳಿ ನಿರ್ಜನ ಪ್ರದೇಶವನ್ನೇ ಆಯ್ಕೆ ಮಾಡಿಕೊಂಡಿರುವ ಈ ದುಷ್ಕರ್ಮಿಗಳ ತಂಡ ವಾಹನಗಳನ್ನು ಅಡ್ಡಗಟ್ಟಿ, ಚಾಕು,ದೊಣ್ಣೆಯಿಂದ ಹಲ್ಲೆ ನಡೆಸಿ ಪರಾರಿಯಾಗುತ್ತಿದ್ದಾರೆ.
ಇದೇ ಸ್ಥಳದಲ್ಲಿ ಹಲವು ಬಾರಿ ಈ ಘಟನೆ ನಡೆದಿವೆ. ಈ ಜಾಗದಲ್ಲಿ ಹಗಲು ರಾತ್ರಿ ಎನ್ನದೇ ಇಂತಹ ಅಪರಾಧ ಕೃತ್ಯಗಳು ನಡೆಯುತ್ತಲೇ ಇವೆ. ಕಳೆದ ರಾತ್ರಿ ಬೈಕಿನಲ್ಲಿ ಬಂದ ಇಬ್ಬರನ್ನು ಅಡ್ಡಗಟ್ಟಿ ಹಲ್ಲೆ ಮಾಡಿ ಹಣ ಕಿತ್ತು ಪರಾರಿಯಾಗಿದ್ದಾರೆ.
ದ್ವಿಚಕ್ರವಾಹನ ಸವಾರರಾದ ಚಂದ್ರಹಾಸ ಮತ್ತು ಕುಮಾರ್ ಎಂಬುವವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಸನ ನಗರದಿಂದ 7 ಕಿಮೀ ದೂರದಲ್ಲಿರುವ ಈ ಪ್ರದೇಶ ಸದ್ಯ ದರೋಡೆಕೋರರ ಸ್ಥಳವಾಗಿದ್ದು, ಜನರು ಓಡಾಡಲು ಭಯಪಡುವಂತಾಗಿದೆ. ಈ ಸ್ಥಳದಲ್ಲಿ ಪೊಲೀಸರ ನಿಯೋಜನೆ ಮಾಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. (ದಿಗ್ವಿಜಯ ನ್ಯೂಸ್)
ಹರಿಯಾಣ ಮಾಜಿ ಸಿಎಂಗೆ 4 ವರ್ಷ ಜೈಲು, 50 ಲಕ್ಷ ರೂ.ದಂಡ ವಿಧಿಸಿದ ವಿಶೇಷ ಕೋರ್ಟ್
ಗ್ರಾಮಕ್ಕೆ ನುಗ್ಗಿ ಬೇವಿನಮರ ಹತ್ತಿ ಕುಳಿತ ಕರಡಿ! ಅರಣ್ಯ ಸಿಬ್ಬಂದಿಯಿಂದ ರಕ್ಷಣೆ