ಸಿದ್ದಾಪುರ: ಜಿಲ್ಲೆಯಲ್ಲಿ ನಿರಂತರವಾಗಿ ಸಮಾಜ ಸೇವೆ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ಜಿಲ್ಲೆಯ ಪ್ರತಿಷ್ಠಿತ ಸಂಘಗಳಲ್ಲಿ ಮುಂಚೂಣಿಯಲ್ಲಿರುವ ಕಂಡಕರೆಯ ಗಾಂಧಿ ಯುವಕ ಸಂಘದಿಂದ ಚೆಟ್ಟಳ್ಳಿ ಪ್ರೌಢಶಾಲಾ ಮೈದಾನದಲ್ಲಿ ಡಿ.24 ಮತ್ತು 25 ರಂದು ರಾಷ್ಟ್ರಮಟ್ಟದ ಅಂಡರ್ 20 ಯುವಕರ ಫುಟ್ಬಾಲ್ ಪಂದ್ಯಾವಳಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಗಾಂಧಿ ಯುವಕ ಸಂಘದ ಪ್ರಧಾನ ಕಾರ್ಯದರ್ಶಿ ಸವಾದ್ ಉಸ್ಮಾನ್ ತಿಳಿಸಿದ್ದಾರೆ.
ಡಿ.24ರಂದು ಬೆಳಗ್ಗೆ 9.45 ಉದ್ಘಾಟನೆಯಾಗಲಿರುವ ಫುಟ್ಬಾಲ್ ಪಂದ್ಯಾವಳಿಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಇಸ್ಮಾಯಿಲ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಯುವ ಕಾಂಗ್ರೆಸ್ ಮುಖಂಡ ಮೈಸಿ ಕತ್ತಣಿರ, ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಧ್ಯಕ್ಷ ಜಾನ್ಸನ್ ಪಿಂಟೋ, ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಸಿ.ಇ. ತೀರ್ಥಕುಮಾರ್, ಚೆಟ್ಟಳ್ಳಿ ಪ್ರೌಢಶಾಲಾ ಆಡಳಿತ ಮಂಡಳಿ ಸಂಚಾಲಕ ಮುಳ್ಳಂಡ ರತ್ತು ಚಂಗಪ್ಪ ಹಾಗೂ ಚೆಟ್ಟಳ್ಳಿಯ ಪ್ರಸಾದ್ ವೈನ್ಸ್ ರೈಮಂಡ್ ರಮ್ಮಿ ಭಾಗವಹಿಸಲಿದ್ದಾರೆ ಎಂದು ಗಾಂಧಿ ಯುವಕ ಸಂಘದ ಪ್ರಧಾನ ಕಾರ್ಯದರ್ಶಿ ಸವಾದ್ ಉಸ್ಮಾನ್ ತಿಳಿಸಿದ್ದಾರೆ.
ರಾಷ್ಟ್ರ ಮಟ್ಟದ ಫುಟ್ಬಾಲ್ ಪಂದ್ಯಾವಳಿ ನಾಳೆಯಿಂದ
ಹುಡುಗಿಯರೇ.. ಬೇಸಿಗೆಯಲ್ಲಿ ಸುಂದರವಾಗಿ ಕಾಣಬೇಕಾದರೆ ಈ ತಪ್ಪುಗಳನ್ನು ಮಾಡಬೇಡಿ! Beauty Tips
Beauty Tips: ಬೇಸಿಗೆ ಸಮೀಪಿಸುತ್ತಿರುವುದರಿಂದ, ಅನೇಕ ಜನರು ತಮ್ಮ ಚರ್ಮವನ್ನು ರಕ್ಷಿಸಲು ಹೆಣಗಾಡುತ್ತಿದ್ದಾರೆ. ಹುಡುಗಿಯರು ಹೊರಗೆ…
ನಿಮಗೆ ಕೂದಲು ಉದುರುವ ಸಮಸ್ಯೆ ಇದೆಯೇ? ಹಾಗಲಕಾಯಿ ರಸವನ್ನು ಹಚ್ಚಿ ಚೆನ್ನಾಗಿ ಮಸಾಜ್ ಮಾಡಿ…bitter gourd
bitter gourd : ನಮ್ಮಲ್ಲಿ ಹಲವರಿಗೆ ಹಾಗಲಕಾಯಿ ತಿನ್ನುವುದು ಇಷ್ಟವಾಗುವುದಿಲ್ಲ. ಹಾಗಲಕಾಯಿ ತಿನ್ನಲು ಸ್ವಲ್ಪ ಕಹಿಯಾಗಿದ್ದರೂ,…
ಸುರಕ್ಷಿತ ಪ್ರಯಾಣಕ್ಕಾಗಿ ನಿಮ್ಮ ಕಾರಿನಲ್ಲಿ ಇರಲೇಬೇಕಾದ 6 ವಸ್ತುಗಳು ಯಾವವು ಗೊತ್ತಾ? Vastu Tips
Vastu Tips: ನಮ್ಮ ಮನೆಗಳು ಮತ್ತು ಕಚೇರಿಗಳಿಗೆ ಮಾತ್ರವಲ್ಲದೆ, ನಮ್ಮ ವಾಹನಗಳಿಗೂ ಕೆಲವು ವಾಸ್ತು ನಂಬಿಕೆಗಳಿವೆ.…