ಬಂಟಕಲ್ ವಿದ್ಯಾರ್ಥಿಗಳಿಗೆ ಬಹುಮಾನ

blank

ಶಿರ್ವ: ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಜೆಎನ್‌ಎನ್ ಇಂಜಿನಿಯರಿಂಗ್ ಕಾಲೇಜು ಶಿವಮೊಗ್ಗದಲ್ಲಿ ನಡೆದ ಪ್ರತಿಷ್ಠಿತ ರಾಷ್ಟ್ರೀಯ ಮಟ್ಟದ ತಾಂತ್ರಿಕ ವಿಚಾರ ಸಂಕಿರಣ ಪ್ಲಾಸ್ಮಾ 2ಕೆ24ರಲ್ಲಿ ಭಾಗವಹಿಸಿ ಕೋಡ್-ಸ್ಪಿರಿಟ್ ಹ್ಯಾಕಥಾನ್‌ನಲ್ಲಿ ಬಹುಮಾನ ಪಡೆದಿದ್ದಾರೆ.

ಕೋಡ್-ಸ್ಪಿರಿಟ್ ಹ್ಯಾಕಥಾನ್‌ನ ಮೊದಲ ಹಂತದ ಸತತ ಏಳು ಗಂಟೆಗಳ ಸ್ಪರ್ಧೆಯಲ್ಲಿ ರಾಷ್ಟ್ರಾದ್ಯಂತ ಒಟ್ಟು 72 ತಂಡಗಳು ಭಾಗವಹಿಸಿದ್ದು, ಅಂತಿಮ ಸುತ್ತಿಗೆ 16 ತಂಡ ಆಯ್ಕೆಯಾಗಿದೆ. ವಿದ್ಯಾಸಂಸ್ಥೆಯ ತಂಡದಲ್ಲಿ ದ್ವಿತೀಯ ವರ್ಷದ ಗಣಕಯಂತ್ರ ವಿಭಾಗದ ವಿದ್ಯಾರ್ಥಿ ತೇಜಸ್ ನಾಯಕ್, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಡೇಟಾ ಸೇನ್ಸ್ ವಿಭಾಗದ ಭೂಷಣ್ ಪೂಜಾರಿ ಮತ್ತು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮಷಿನ್ ಲರ್ನಿಂಗ್ ವಿಭಾಗದ ಪೂರ್ಣಾನಂದ ಮತ್ತು ಶಿವಂ ಶೆಟ್ಟಿ ಭಾಗವಹಿಸಿದ್ದು ಪ್ರಥಮ ಸ್ಥಾನಗಳಿಸಿದೆ.

ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು ಮತ್ತು ಸಹ ಪಠ್ಯೇತರ ಚಟುವಟಿಕೆ ಸಂಯೋಜಕರು ಅಭಿನಂದಿಸಿದ್ದಾರೆ.

ಅಕ್ರಮ ಸಕ್ರಮ ಇತ್ಯರ್ಥಕ್ಕೆ ಕ್ರಮ

ಆನೆಗುಂದಿ ಮಠದಲ್ಲಿ ತಾಳಮದ್ದಲೆ ಸಪ್ತಾಹ

 

Share This Article

ಬೇಯಿಸಿದ ಆಲೂಗಡ್ಡೆಯನ್ನು ಹೆಚ್ಚು ಕಾಲ ಬಳಸಲು ಫ್ರಿಡ್ಜ್‌ನಲ್ಲಿ ಇಡಬಹುದೇ; ತಜ್ಞರು ಹೇಳುವುದೇನು? | Health Tips

ಬೇಯಿಸಿದ ಆಲೂಗಡ್ಡೆಯನ್ನು ಫ್ರಿಡ್ಜ್‌ನಲ್ಲಿ ಇಡುವುದು ಅನೇಕ ಜನರಿಗೆ ಸಾಮಾನ್ಯ ಅಭ್ಯಾಸವಾಗಿದೆ. ಆದರೆ ಅವುಗಳನ್ನು ಸಂಗ್ರಹಿಸಲು ಇದು…

ಈ ಕೆಟ್ಟ ಅಭ್ಯಾಸಗಳಿಂದ ಮಹಿಳೆಯರು ಗರ್ಭಧರಿಸಲು ಸಾಧ್ಯವಾಗುವುದಿಲ್ಲ; ತಿಳಿದುಕೊಳ್ಳಲೇಬೇಕಾದ ಮಾಹಿತಿ |Health Tips

ಥೈರಾಯ್ಡ್, ಪಿಸಿಓಎಸ್ ಮತ್ತು ಇತರ ಹಾರ್ಮೋನುಗಳ ಬದಲಾವಣೆಗಳಂತಹ ಹಲವು ಕಾರಣಗಳಿಂದ ಮಹಿಳೆಯರ ಬಂಜೆತನ ಉಂಟಾಗಬಹುದು. ಇದು…

ಇಲ್ಲಿ ಮಹಿಳೆಯರು ಬಿಕಿನಿ ಧರಿಸುವಂತಿಲ್ಲ; ಉಲ್ಲಂಘನೆ ಮಾಡಿದ್ರೆ ಆಗುತ್ತೆ ಕಠಿಣ ಶಿಕ್ಷೆ; ಎಲ್ಲಿ ಗೊತ್ತೆ? | Bikinis

Bikinis : ಸಾಮಾನ್ಯವಾಗಿ ಬೀಚ್​ಗಳಲ್ಲಿ ಯುವತಿಯರು ಸೇರಿದಂತೆ ಮಹಿಳೆಯರು ಬಿಕಿನಿ ಧರಿಸಿ ಓಡಾಡುತ್ತಾರೆ. ಅಲ್ಲದೆ, ನಮ್ಮದೆ…