More

    ಜ.25ರಂದು ರಾಷ್ಟ್ರೀಯ ಮತದಾರರ ದಿನ: ಜಿಪಂ ಸಿಇಒ ಶಾಂತಾ ಎಲ್.ಹುಲ್ಮನಿ ಮಾಹಿತಿ

    ಮಂಡ್ಯ: ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಜ.25ರಂದು ರಾಷ್ಟ್ರೀಯ ಮತದಾರರ ದಿನವನ್ನು ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಚರಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಶಾಂತಾ ಎಲ್. ಹುಲ್ಮನಿ ತಿಳಿಸಿದರು.
    ನಗರದ ಜಿಪಂ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಮತದಾರರ ಪಟ್ಟಿಯಲ್ಲಿ 18 ವರ್ಷ ತುಂಬಿದ ಪ್ರತಿಯೊಬ್ಬರೂ ನೋಂದಣಿ ಮಾಡಿಕೊಂಡು ಮತ ಚಲಾಯಿಸಬೇಕೆಂಬ ಉದ್ದೇಶದಿಂದ ರಾಷ್ಟ್ರೀಯ ಮತದಾರರ ದಿನ ಆಚರಿಸಲಾಗುತ್ತಿದೆ ಎಂದರು.
    ಅಂದು ಯುವ ಮತದಾರರನ್ನು ತೊಡಗಿಸಿಕೊಂಡು ವಿನೂತನವಾಗಿ ಆಚರಿಸಬೇಕು. ಈ ಹಿನ್ನೆಲೆಯಲ್ಲಿ ಪದವಿಪೂರ್ವ ಹಾಗೂ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಹೆಚ್ಚು ಪಾಲ್ಗೊಳ್ಳುವಂತೆ ಸಂಘಟಿಸಬೇಕು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾಧಿಕಾರಿ ಕಚೇರಿಯಿಂದ ಅಂಬೇಡ್ಕರ್ ಭವನದವರೆಗೆ ಜಾಥಾ ನಡೆಸಬೇಕು. ಪ್ರಮುಖ ವೃತ್ತಗಳಲ್ಲಿ ಮಾನವ ಸರಪಳಿ ರಚಿಸಿ ಜಾಗೃತಿ ಮೂಡಿಸಬೇಕು. ಮತದಾನ ಜಾಗೃತಿ ಕುರಿತು ರಂಗೋಲಿ ಸ್ಪರ್ಧೆ ಆಯೊಜಿಸುವಂತೆ ತಿಳಿಸಿದರು.
    ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ ಸಂಜಿವಪ್ಪ, ಯೋಜನಾ ನಿರ್ದೇಶಕ ಧನರಾಜ್, ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿ ಶ್ರೀನಿವಾಸ್, ಶ್ರೀರಂಗಪಟ್ಟಣ ತಾಪಂ ಇಒ ವೀಣಾ, ಜಿಲ್ಲಾ ವಾರ್ತಾಧಿಕಾರಿ ಎಸ್.ಎಚ್.ನಿರ್ಮಲಾ, ಆರೋಗ್ಯ ಶಿಕ್ಷಣಾಧಿಕಾರಿ ವೇಣುಗೋಪಾಲ್, ಲೋಕೇಶ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts