ನವನಗರದಲ್ಲಿ ಘಟಸ್ಥಾಪನೆ ಉತ್ಸವ

blank

ಹುಬ್ಬಳ್ಳಿ: ಇಲ್ಲಿಯ ನವನಗರದ ಶಾರದೀಯ ನವರಾತ್ರಿ ಮಹೋತ್ಸವ ಅಂಗವಾಗಿ ಗಂಗಾಧರನಗರ ಶ್ರೀ ತುಳಜಾಭವಾನಿ ದೇವಸ್ಥಾನದಲ್ಲಿ ನವರಾತ್ರೋತ್ಸವದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಭಾನುವಾರ ಸಂಜೆ ದೇವಸ್ಥಾನದಲ್ಲಿ ಘಟಸ್ಥಾಪನೆ ಹಾಗೂ ಮಹಾಮಂಗಳಾರತಿ ನೆರವೇರಿಸಲಾಯಿತು. ನಿತ್ಯ ಬೆಳಗ್ಗೆ 7ರಿಂದ ಅಭಿಷೇಕ, ಪಂಚಾಮೃತ ಮಹಾಪೂಜೆ, ಆರತಿ, ಪ್ರಸಾದ, ರಾತ್ರಿ ಮಹಾಮಂಗಳಾರತಿ, ಪ್ರಸಾದ ವ್ಯವಸ್ಥೆ ಮಾಡಲಾಗಿದೆ.

ಅ. 16ರಂದು ಸಂಜೆ ಭಾವಸಾರ ಕ್ಷತ್ರಿಯ ಮಹಿಳಾ ಮಂಡಳ, ಮಾಲತಿ ವಾದೋನೆ ಹಾಗೂ ಸಂಗಡಿಗರಿಂದ ಭಕ್ತೀಗಿತೆ ಆಯೋಜಿಸಲಾಗಿದೆ. ಇದೇ ರೀತಿ ನಿತ್ಯ ಸಂಜೆ ವಿವಿಧ ಭಜನಾ ಮಂಡಳಿಗಳಿಂದ ಭಜನೆ, ಸಂಗೀತ ಕಾರ್ಯಕ್ರಮ ನಡೆಯಲಿವೆ.

ಅ. 22ರಂದು ಬೆಳಗ್ಗೆ 11ಕ್ಕೆ ಕುಮಾರಿಕಾ ಪೂಜಾ, ಸುಮಂಗಲಿಯರಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಲಿದೆ.

ಅ. 24ರಂದು ಬೆಳಗ್ಗೆ ಪೂಜಾರಾಧನೆ, ಸಂಜೆ ಪಲ್ಲಕ್ಕಿಯೊಂದಿಗೆ ಉತ್ಸವ ಮೂತಿರ್ ಸಮೇತ ಬನ್ನಿ ಮಂಟಪದಲ್ಲಿ ಶಮಿ ಪೂಜನ ಹಾಗೂ ದೇವಸ್ಥಾನದಲ್ಲಿ ದಸರಾ ಉತ್ಸವ, ಮಧ್ಯಾಹ್ನ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿದೆ.

ಸಂಜೆ 7ಕ್ಕೆ ನವನಗರ ತುಳಜಾಭವಾನಿ ಮಹಿಳಾ ಮಂಡಳದಿಂದ ದಾಂಡಿಯಾ ಹಾಗೂ ಸಾಂಸತಿಕ ಕಾರ್ಯಕ್ರಮ, ಮಕ್ಕಳಿಂದ ವೇಷಭೂಷಣ ಸ್ಪರ್ಧೆ ನಡೆಯಲಿದೆ ಎಂದು ಭಾವಸಾರ ಕ್ಷತ್ರೀಯ ನವರಾತ್ರಿ ಮಹೋತ್ಸವ ಸಮಿತಿ ಪ್ರಕಟಣೆ ತಿಳಿಸಿದೆ.

Share This Article

ಮನೆಯಲ್ಲೇ ಗಟ್ಟಿ ಮೊಸರು ಮಾಡುವ ವಿಧಾನ ನಿಮಗೆ ತಿಳಿದಿದೆಯೇ; ಇಲ್ಲಿದೆ ಸಿಂಪಲ್ ಟ್ರಿ​ಕ್ಸ್​​​​​ | Health Tips

ಚಳಿಗಾಲವಿರಲಿ, ಬೇಸಿಗೆಯಿರಲಿ ಮೊಸರನ್ನು ಇಷ್ಟಪಡುವವರು ಹವಾಮಾನ ಬದಲಾದಾಗಲೂ ಅದನ್ನು ತಿನ್ನುವುದನ್ನು ನಿಲ್ಲಿಸುವುದಿಲ್ಲ. ಚಳಿ ಹೆಚ್ಚಾದಾಗಲೂ ಅನೇಕರು…

ಊಟದ ಸಮಯದಲ್ಲಿ ಈ ತಪ್ಪುಗಳನ್ನು ಮಾಡಲೇಬೇಡಿ; ಮಾಹಿತಿ ತಿಳಿದು ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚಾಗುವುದನ್ನು ತಪ್ಪಿಸಿ | Health Tips

ಮಧುಮೇಹವು ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ವೇಗವಾಗಿ ಹರಡುತ್ತಿದೆ. WHO ಕೂಡ ಈ ಬಗ್ಗೆ ಕಳವಳ ವ್ಯಕ್ತಪಡಿಸಿದೆ.…

ಈ ಪದಾರ್ಥಗಳನ್ನು ಯಾವುದೇ ಕಾರಣಕ್ಕೂ ಕುಕ್ಕರ್‌ನಲ್ಲಿ ಬೇಯಿಸಬೇಡಿ, ವಿಷಕಾರಿಯಾಗಬಹುದು ಎಚ್ಚರ! Pressure Cooker

Pressure Cooker : ಪ್ರೆಶರ್​ ಕುಕ್ಕರ್ ಇಂದು ಪ್ರತಿ ಮನೆಗಳಲ್ಲೂ ಅಗತ್ಯವಿರುವ ಅಡುಗೆ ಸಲಕರಣೆಗಳಲ್ಲಿ ಒಂದಾಗಿದೆ.…