ಕೇರಳ: ಎರಡು ದಿನಗಳ ಪ್ರವಾಸಕ್ಕಾಗಿ ಸೋಮವಾರ (ಏಪ್ರಿಲ್ 24) ಸಂಜೆ ಪ್ರಧಾನಿ ಮೋದಿ ದೇವರು ನಾಡು ಕೇರಳಕ್ಕೆ ಭೇಟಿ ನೀಡಿದರು. ಈ ವೇಳೆ ಕೊಚ್ಚಿಯಲ್ಲಿ ನಡೆದ ಯುವಂ 2023 ಕಾರ್ಯಕ್ರಮದಲ್ಲಿ ಮೋದಿ ಭಾಗವಹಿಸಿದರು. ಉನ್ನಿ ಮುಕುಂದನ್, ನವ್ಯಾ ನಾಯರ್ ಮತ್ತು ಅಪರ್ಣಾ ಬಾಲಮುರಳಿ ಸೇರಿದಂತೆ ಮಲಯಾಳಂ ಚಿತ್ರರಂಗದ ಕಲಾವಿದರು ಸಹ ಮೋದಿ ಜೊತೆ ವೇದಿಕೆ ಹಂಚಿಕೊಂಡರು.
ಕಲಾವಿದರ ವಿರುದ್ಧ ಆಕ್ರೋಶ
ಮೋದಿ ಜತೆ ಮಲಯಾಳಂ ನಟ-ನಟಿಯರು ಇರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಕೆಲವರು ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದು, ನವ್ಯಾ ಅವರಿಂದ ನಾವು ಇದನ್ನು ನಿರೀಕ್ಷಿಸಿರಲಿಲ್ಲ ಎಂದಿದ್ದಾರೆ. ಇನ್ನು ಕೆಲವರು ಹಣಕ್ಕಾಗಿ ಅಪರ್ಣಾ ಬಾಲಮುರಳಿ ಮತ್ತು ನವ್ಯಾ ಅಂಥವರು ಕಾರ್ಯಕ್ರಮದಲ್ಲಿ ಭಾಗಹಿಸಿದ್ದಾರೆ ಎಂದು ಟೀಕೆ ಮಾಡಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಚುನಾವಣೆ ನಡೆಸುತ್ತಿರುವುದು ಚುನಾವಣಾ ಆಯೋಗವೋ? ಬಿಜೆಪಿಯೋ? ಸಿದ್ದು ಕಿಡಿ
ಟ್ರೋಲಿಗರಿಗೆ ತಿರುಗೇಟು
ಜಾಲತಾಣದಲ್ಲಿ ಸಾಕಷ್ಟು ಟ್ರೋಲ್ ಆದರೂ ಯಾವುದಕ್ಕೂ ಕ್ಯಾರೆ ಎನ್ನದ ನವ್ಯಾ ನಾಯರ್, ಇದೀಗ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಪ್ರಧಾನಿ ಮೋದಿ ಜತೆ ತೆಗೆಸಿಕೊಂಡಿರುವ ಫೋಟೋಗಳನ್ನು ಶೇರ್ ಮಾಡಿದ್ದಾರೆ. ಭಾರತದ ಗೌರವಾನ್ವಿತ ಪ್ರಧಾನ ಮಂತ್ರಿಗಳೊಂದಿಗೆ ವೇದಿಕೆ ಹಂಚಿಕೊಂಡಿದ್ದು ನನ್ನ ಸೌಭಾಗ್ಯ ಎಂದು ಫೋಟೋಗಳಿಗೆ ಅಡಿಬರಹ ನೀಡುವ ಮೂಲಕ ಟ್ರೋಲಿಗರಿಗೆ ನವ್ಯಾ ತಿರುಗೇಟು ನೀಡಿದ್ದಾರೆ.
View this post on Instagram
ಇನ್ನೂ ನವ್ಯಾ ನಾಯರ್ ಬಗ್ಗೆ ಕನ್ನಡಿಗರಿಗೆ ಹೆಚ್ಚಿಗೆ ಹೇಳಬೇಕಿಲ್ಲ. ಮಲಯಾಳಂ ಮೂಲದ ನಟಿಯಾದರೂ ಕನ್ನಡದಲ್ಲೂ ಮನೆ ಮಾತಾಗಿದ್ದಾರೆ. ಅದಕ್ಕೆ ಕಾರಣ ಅವರು ಕನ್ನಡ ನೆಲದಲ್ಲಿ ಕೊಟ್ಟಂತಹ ಸೂಪರ್ ಹಿಟ್ ಸಿನಿಮಾಗಳು. ದರ್ಶನ್ ಅಭಿನಯದ ಗಜ ಹಾಗೂ ರವಿಚಂದ್ರನ್ ಜೊತೆ ದೃಶ್ಯ ಸಿನಿಮಾಗಳಲ್ಲಿ ನಟಿಸಿದ್ದಾರೆ. ಇಷ್ಟೇ ಅಲ್ಲದೆ, ಬಾಸ್ ದೃಶ್ಯ-2, ನಮ್ಮ ಯಜಮಾನರು ಸೇರಿದಂತೆ ಕೆಲ ಸಿನಿಮಾಗಳಲ್ಲಿ ನವ್ಯಾ ನಟಿಸಿದ್ದಾರೆ. (ಏಜೆನ್ಸೀಸ್) ಇದನ್ನೂ ಓದಿ: ತಮಿಳು ನಾಡಗೀತೆ ನಿಲ್ಲಿಸಿ ಕನ್ನಡ ನಾಡಗೀತೆ ಹಾಕಿಸಿದ ಶಾಸಕ ಕೆ.ಎಸ್.ಈಶ್ವರಪ್ಪ
ಶಿವಮೊಗ್ಗದಲ್ಲಿ ಚೆನ್ನಬಸಪ್ಪ ಗೆದ್ದರೇ ನಾನು ಗೆದ್ದ ಹಾಗೆ: ಕೆ.ಎಸ್. ಈಶ್ವರಪ್ಪ
ತಮಿಳು ನಾಡಗೀತೆ ನಿಲ್ಲಿಸಿ ಕನ್ನಡ ನಾಡಗೀತೆ ಹಾಕಿಸಿದ ಶಾಸಕ ಕೆ.ಎಸ್.ಈಶ್ವರಪ್ಪ
VIDEO| RCB ಗೆಲ್ಲೋವರ್ಗೂ ನಾನು ಶಾಲೆಗೆ ಸೇರೋದಿಲ್ಲ…ಪೋಸ್ಟರ್ ಹಿಡಿದ ಪುಟಾಣಿ