19 ಕ್ರಿಮಿನಲ್ ಪ್ರಕರಣಗಳಲ್ಲಿ ಬೇಕಾಗಿದ್ದ ಮೋಸ್ಟ್ ವಾಂಟೆಡ್ ನಕ್ಸಲ್​ ಎನ್​ಕೌಂಟರ್​ಗೆ ಬಲಿ

ಛತ್ತೀಸಗಢ: 19 ಕ್ರಿಮಿನಲ್ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ, ಮೋಸ್ಟ್​ ವಾಂಟೆಡ್ ನಕ್ಸಲ್​ವೋರ್ವನನ್ನು ದಂತೇವಾಡದಲ್ಲಿ ಭದ್ರತಾ ಪಡೆಗಳು ಹೊಡೆದುರುಳಿಸಿವೆ. ಕಾಟೆಕಲ್ಯಾಣ ಪೊಲೀಸ್ ಠಾಣೆ ವ್ಯಾಪ್ತಿಯ ಜಬ್ರಾಮೆಟ್ಟಾ ಅರಣ್ಯದಲ್ಲಿ ಜಿಲ್ಲಾ ರಿಸರ್ವ್ ಗಾರ್ಡ್​ ಪೊಲೀಸರೊಂದಿಗೆ ಸೋಮವಾರ ಮಧ್ಯರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಈ ನಕ್ಸಲ್​ ಹತನಾಗಿದ್ದಾನೆ. ಅರಣ್ಯ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ಭದ್ರತಾ ಪಡೆಗಳನ್ನು ಗುರಿಯಾಗಿಸಿ ನಕ್ಸಲರು ದಾಳಿ ಮಾಡಿದಾಗ, ಡಿಆರ್​ಜಿ ಯೋಧರು ಪ್ರತಿದಾಳಿ ನಡೆಸಿದರು. ಆದರೆ, ಕತ್ತಲೆ ಇದ್ದುದರಿಂದ ಕೆಲ ನಕ್ಸಲರು ಪರಾರಿಯಾಗುವಲ್ಲಿ ಸಫಲರಾಗಿದ್ದಾರೆ. ನಂತರ ಗುಂಡಿನ ಚಕಮಕಿ … Continue reading 19 ಕ್ರಿಮಿನಲ್ ಪ್ರಕರಣಗಳಲ್ಲಿ ಬೇಕಾಗಿದ್ದ ಮೋಸ್ಟ್ ವಾಂಟೆಡ್ ನಕ್ಸಲ್​ ಎನ್​ಕೌಂಟರ್​ಗೆ ಬಲಿ