ತಿರುಪತಿ: ನಿನ್ನೆಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವದಂಪತಿ ನಯನತಾರಾ ಹಾಗೂ ವಿಘ್ನೇಶ್ ಶಿವನ್ ಇಂದು ತಿರುಪತಿಗೆ ಭೇಟಿ ನೀಡಿದ್ದಾರೆ.
ಶುಕ್ರವಾರ ಬೆಳಗ್ಗೆ ತಿರುಪತಿಗೆ ಭೇಟಿ ನೀಡಿದ ಈ ನವಜೋಡಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಗುರುವಾರವಷ್ಟೇ ತಮಿಳುನಾಡಿನ ಮಹಾಬಲಿಪುರಂನಲ್ಲಿ ಅದ್ಧೂರಿಯಾಗಿ ವಿವಾಹ ನಡೆಯಿತು.
ಹಸಿರು ಬಣ್ಣದ ಅಂಚಿರುವ ಹಳದಿ ಬಣ್ಣದ ಸೀರೆಯಲ್ಲಿ ಕಂಗೊಳಿಸುತ್ತಿರುವ ನಯನಾ, ಪತಿ ವಿಘ್ನೇಶ್ ಕೂಡ ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡರು.
ಬಾಲಿವುಡ್ ನಟ ಶಾರುಖ್ ಖಾನ್, ಸೇರಿದಂತೆ ರಜನಿಕಾಂತ್ ಹಾಗೂ ದಕ್ಷಿಣ ಭಾರತದ ಪ್ರಮುಖ ನಟ-ನಟಿಯರು ಮದುವೆ ಸಮಾರಂಭದಲ್ಲಿ ಭಾಗಿಯಾಗಿದ್ದರು.
ಈ ಹಿಂದೆ ತಿರುಪತಿಯಲ್ಲೇ ಮದುವೆ ನಿಶ್ಚಯಿಸಿದ್ದ ಈ ಜೋಡಿ, ಕೊನೇ ಕ್ಷಣದಲ್ಲಿ ಸ್ಥಳ ಬದಲಾಯಿಸಿದ್ದರು. ಒಟ್ಟಾರೆ ಲೇಡಿ ಸೂಪರ್ ಸ್ಟಾರ್ ಎಂದೇ ಕರೆಸಿಕೊಂಡಿರುವ ನಯನತಾರಾ ಹಲವು ವರ್ಷಗಳ ಡೇಟಿಂಗ್ ಬಳಿಕ ಈ ಜೋಡಿ ಹಸೆಮಣೆಯೇರಿದ್ದಾರೆ. (ಏಜೆನ್ಸೀಸ್)