More

    ನಿತೀಶ್​ಕುಮಾರ್​ಗೆ ಮತ್ತೆ ಒಲಿದ ಬಿಹಾರ ಸಿಎಂ ಗಾದಿ

    ಪಟನಾ: ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್​ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ.

    ಬಹಳ ಕುತೂಹಲ ಕೆರಳಿಸಿದ್ದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಎನ್​ಡಿಎ ಸರ್ಕಾರಕ್ಕೆ ಅಧಿಕಾರ ಸಿಕ್ಕಿದ್ದು, ನಿತೀಶ್​ ಕುಮಾರ್​ಗೆ ಮತ್ತೆ ಸಿಎಂ ಪಟ್ಟ ಕಟ್ಟಲು ಎನ್​ಡಿಎ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

    ಭಾನುವಾರ ನಡೆದ ಎನ್​ಡಿಎ ಸಭೆಯಲ್ಲಿ ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್​ ಕುಮಾರ್​ ಅವರನ್ನು ಆಯ್ಕೆ ಮಾಡಲಾಗಿದೆ. ಜೆಡಿಯು ಕಡಿಮೆ ಸ್ಥಾನ ಗೆದ್ದರೂ ನಿತೀಶ್​ಗೆ ನಾಲ್ಕನೇ ಬಾರಿ ಮುಖ್ಯಮಂತ್ರಿ ಆಗುವ ಅವಕಾಶ ಒಲಿದಿದೆ.

    ಜಿದ್ದಾಜಿದ್ದಿನ ಹೋರಾಟದಲ್ಲಿ ಮಹಾಘಟಬಂಧನ್​ ವಿರುದ್ಧ ಎನ್​ಡಿಎ(ಬಿಜೆಪಿ, ಜೆಡಿಯು, ಎಚ್​ಎಎಂ ಹಾಗೂ ವಿಐಪಿ ಪಕ್ಷಗಳು) ಸ್ಪಷ್ಟ ಬಹುಮತ ಪಡೆದಿದೆ. ಪ್ರತಿ ಹಂತದಲ್ಲೂ ಕುತೂಹಲ ಸೃಷ್ಟಿಸಿದ್ದ ಪೈಪೋಟಿಯಲ್ಲಿ ಎನ್‍ಡಿಎಗೆ ರೋಚಕ ಗೆಲುವು ಸಿಕ್ಕಿದೆ. ಶುಕ್ರವಾರವಷ್ಟೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ನಿತೀಶ್​ಕುಮಾರ್​, ಹೊಸ ಎನ್​ಡಿಎ ಸರ್ಕಾರ ಆಡಳಿತ ಚುಕ್ಕಾಣಿ ಹಿಡಿಯುವ ತನಕ ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರಿದಿದ್ದರು.

    ಇದೀಗ ಎನ್​ಡಿಎ ಸಭೆಯಲ್ಲಿ ಮುಖ್ಯಮಂತ್ರಿ ಯಾರೆಂಬ ನಿರ್ಣಯ ಹೊರಬಿದ್ದಿದ್ದು, ನಿತೀಶ್​ ಅವರಿಗೆ ಸಿಎಂ ಗಾದಿ ಒಲಿದಿದೆ. ಸೋಮವಾರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯುವ ಸಾಧ್ಯತೆ ಇದೆ.

    ಜಯಚಂದ್ರ ಕೇಳಿದ್ದನ್ನ ಡಿಕೆಶಿ ಕೊಡ್ಲಿಲ್ವಂತೆ… ಅದಕ್ಕೆ ಶಿರಾದಲ್ಲಿ ಕಾಂಗ್ರೆಸ್​ ಸೋಲ್ತಂತೆ!

    ಬಿಹಾರದಲ್ಲಿ ಮತ್ತೆ ಪ್ರಜಾಪ್ರಭುತ್ವಕ್ಕೆ ಗೆಲುವಾಗಿದೆ- ಪ್ರಧಾನಿ ನರೇಂದ್ರ ಮೋದಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts