ಬೆಂಗಳೂರು: ಕಳೆದ ವರ್ಷ ಸಂಭವಿಸಿದ ಪ್ರವಾಹ, ಚಂಡಮಾರುತ, ಭೂಕುಸಿತ ಮುಂತಾದ ಪ್ರಕೃತಿವಿಕೋಪ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿ (ಎನ್ಡಿಆರ್ಎಫ್) ಮೂಲಕ 4,381. 88 ಕೋಟಿ ರೂಪಾಯಿ ಮಂಜೂರು ಮಾಡಿದೆ.
ಕೇಂದ್ರ ಗೃಹಸಚಿವ ಅಮಿತ್ ಷಾ ಅವರ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಮಿತಿಯು ಕರ್ನಾಟಕ, ಮಹಾರಾಷ್ಟ್ರ, ಸಿಕ್ಕಿಂ, ಮಧ್ಯಪ್ರದೇಶ ಮತ್ತು ಪಶ್ಚಿಮ ಬಂಗಾಳಗಳಿಗೆ ಒಟ್ಟು 4,381. 88 ಕೋಟಿ ರೂ. ಮಂಜೂರು ಮಾಡಿದೆ.
ಪ್ರವಾಹ ಮತ್ತು ಭೂಕುಸಿತ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ 577.84 ಕೋಟಿ ರೂ., ಮಧ್ಯಪ್ರದೇಶಕ್ಕೆ 611.61 ಕೋಟಿ ರೂ., ಸಿಕ್ಕಿಂಗೆ 87.84 ಕೋಟಿ ರೂ. ಮತ್ತು ಚಂಡಮಾರುತ ಹಿನ್ನೆಲೆಯಲ್ಲಿ ಮಹಾರಾಷ್ಟ್ರಕ್ಕೆ 268.69 ಕೋಟಿ ರೂ. ಹಂಚಿಕೆ ಮಾಡಲಾಗಿದೆ. ಇನ್ನು ಚಂಡಮಾರುತ ಹಿನ್ನೆಲೆಯಲ್ಲಿ ಪಶ್ಚಿಮಬಂಗಾಲಕ್ಕೆ 2,707.77 ಕೋಟಿ ರೂ., ಒಡಿಶಾಗೆ 128.23 ಕೋಟಿ ರೂ. ಹಂಚಿಕೆ ಆಗಿದೆ ಎಂದು ಮೂಲಗೂ ತಿಳಿಸಿವೆ.
ಅಲ್ಲದೆ 2020-21ರ ಸಾಲಿನಲ್ಲಿ ಕೇಂದ್ರ ಸರ್ಕಾರ ಈಗಾಗಲೇ ಹೆಚ್ಚುವರಿಯಾಗಿ ಇದುವರೆಗೆ ಎಸ್ಡಿಆರ್ಎಫ್ ಅಡಿ 28 ರಾಜ್ಯಗಳಿಗೆ 15,524.43 ಕೋಟಿ ರೂ. ಬಿಡುಗಡೆ ಮಾಡಿದೆ. (ಏಜೆನ್ಸೀಸ್)