ಕೇಂದ್ರ ಸರ್ಕಾರದಿಂದ ರೈತರ ಕಡೆಗಣನೆ

blank

ಕುಶಾಲನಗರ: ಅಖಿಲ ಭಾರತ ಯುನೈಟೆಡ್ ಕಿಸಾನ್ ಮಹಾ ಸಭಾದ ಕೊಡಗು ಸಮಿತಿ ವತಿಯಿಂದ ಕುಶಾಲನಗರದ ತಹಸೀಲ್ದಾರ್ ಕಚೇರಿ ಬಳಿ ರೈತರು ಹಾಗೂ ಜನಸಾಮಾನ್ಯರ ಹಿತಾಸಕ್ತಿಗಾಗಿ ಸರ್ಕಾರಗಳನ್ನು ಒತ್ತಾಯಿಸಲು ಹಕ್ಕೊತ್ತಾಯ ದಿನ ಆಚರಿಸಲಾಯಿತು.

ಕಿಸಾನ್ ಮಹಾ ಸಭಾದ ಕೇಂದ್ರ ಸಮಿತಿಯ ಪದಾಧಿಕಾರಿ ನಿರ್ವಾಣಪ್ಪ ಅವರ ನೇತೃತ್ವದಲ್ಲಿ ಗುರುವಾರ ಆಯೋಜಿಸಿದ್ದ ಹಕ್ಕೊತ್ತಾಯ ದಿನಾಚರಣೆ ಕಾರ್ಯಕ್ರಮದಲ್ಲಿ ಘೋಷಣೆಗಳನ್ನು ಕೂಗಲಾಯಿತು.

ಈ ಸಂದರ್ಭ ಮಾತನಾಡಿದ ನಿರ್ವಾಣಪ್ಪ, ಕೇಂದ್ರದ ಬಿಜೆಪಿ ಸರ್ಕಾರ ರೈತರ ಹಿತಾಸಕ್ತಿಯನ್ನು ಕಡೆಗಣಿಸಿದೆ. ಕೃಷಿ ಕಾರ್ಮಿಕರು, ಅಸಂಘಟಿತ, ಐಸಿಡಿಎಸ್, ಮಧ್ಯಾಹ್ನದ ಊಟದ ಕಾರ್ಮಿಕರಿಗೆ ವೇತನವನ್ನು ಹೆಚ್ಚಿಸದೆ ವಂಚಿಸಲಾಗುತ್ತಿದೆ. ಕೃಷಿ ಉತ್ಪನ್ನಗಳ ಕನಿಷ್ಠ ಬೆಂಬಲ ಬೆಲೆ ನೀಡುವಲ್ಲಿ ವಿಫಲವಾಗಿದೆ. ನಿರುದ್ಯೋಗಿ ಜನರಿಗೆ 200 ದಿನಗಳ ಕಾಲ ದಿನಕ್ಕೆ 600 ರೂ.ಗಳ ಕೂಲಿಯಂತೆ ನೀಡಲು ಮನರೇಗಾ ಯೋಜನೆಗೆ ಅನುದಾನ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆಯ ಕಾನೂನು ಖಾತ್ರಿ ಒದಗಿಸಬೇಕು. ಕೃಷಿ ಕಾರ್ಮಿಕರು, ಸಣ್ಣ, ಅತಿ ಸಣ್ಣ ಹಾಗೂ ಮಧ್ಯಮ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. 2006ರ ಅರಣ್ಯ ಹಕ್ಕು ಕಾಯ್ದೆಯನ್ನು ಸಮಗ್ರವಾಗಿ ಅನುಷ್ಠಾನಗೊಳಿಸಬೇಕು. ಮನೆಯಿಲ್ಲದ ಭೂರಹಿತರಿಗೆ ಭೂಮಿ, ಹಸಿದವರಿಗೆ ಆಹಾರ, ಮನೆಯಿಲ್ಲದವರಿಗೆ ಮನೆ ಹಾಗೂ ಉದ್ಯೋಗಗಳನ್ನು ನೀಡಬೇಕೆಂಬ ಹಕ್ಕೊತ್ತಾಯಗಳ ಮನವಿ ಪತ್ರವನ್ನು ರಾಷ್ಟ್ರಪತಿಗೆ ತಹಸೀಲ್ದಾರ್ ಕಿರಣ್ ಗೌರಯ್ಯ ಮೂಲಕ ರವಾನಿಸಲಾಯಿತು.

ಕಿಸಾನ್ ಮಹಾಸಭಾದ ಕೊಡಗು ಜಿಲ್ಲಾಧ್ಯಕ್ಷ ಎಚ್.ಜೆ.ಪ್ರಕಾಶ್, ಪ್ರಮುಖರಾದ ಸಣ್ಣಪ್ಪ, ಸಾವಿತ್ರಮ್ಮ, ಜವರಯ್ಯ, ಎಚ್.ಬಿ.ರಾಜು, ಚಿಣ್ಣಪ್ಪ, ಮಂಜು ಇತರರಿದ್ದರು.

Share This Article

ಐಸ್​​ಕ್ಯೂಬ್​​ನಿಂದ ಮುಖಕ್ಕೆ ಮಸಾಜ್ ಮಾಡಿದ್ರೆ ನಿಮ್ಮ ಸೌಂದರ್ಯ ಹೆಚ್ಚುತ್ತದೆ! ತಜ್ಞರು ಏನು ಹೇಳುತ್ತಾರೆ? Ice cube Remedy

Ice cube Remedy : ಮುಖ ಸುಂದರವಾಗಿ ಕಾಣಲು ಅನೇಕ ಜನರು ವಿವಿಧ ಸಲಹೆಗಳನ್ನು ಅನುಸರಿಸುತ್ತಾರೆ.…

ಈ ನಕ್ಷತ್ರದಲ್ಲಿ ಹುಟ್ಟಿದ ಗಂಡಸರು ತಮ್ಮ ಪತ್ನಿಯರನ್ನು ರಾಜಕುಮಾರಿಯಂತೆ ನೋಡಿಕೊಳ್ಳುತ್ತಾರೆ! Birth of Stars

Birth of Stars : ಹುಟ್ಟಿದ ತಕ್ಷಣ ಜನ್ಮ ದಿನಾಂಕ ಹಾಗೂ ಹುಟ್ಟಿದ ಗಳಿಗೆಯನ್ನು ಬರೆದಿಡಲಾಗುತ್ತದೆ.…

ಕಲ್ಲಂಗಡಿ ಹಣ್ಣು ತಿಂದು ಸಿಪ್ಪೆ ಬಿಸಾಡ್ತೀರಾ? ಹಣ್ಣಿನ ಸಿಪ್ಪೆ ತಿಂದ್ರೆ ಪುರುಷರಿಗೆ ಆ ಸಾಮರ್ಥ್ಯ ಹೆಚ್ಚಾಗುವುದು! watermelon

watermelon: ಬೇಸಿಗೆ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು  ಕಲ್ಲಂಗಡಿ ಹಣ್ಣು. ನಾವು ಕಲ್ಲಂಗಡಿ ಹಣ್ಣುಗಳನ್ನು…