ಸರ್ಕಾರಿ ಆಸ್ಪತ್ರೆ ನಿರ್ವಹಣೆಗೆ ನಿರ್ಲಕ್ಷ : ಗುರುರಾಜ್ ಗಂಟಿಹೊಳೆ ಆರೋಪ ; ಸಮಸ್ಯೆ ಪರಿಹಾರಕ್ಕೆ ಸೂಚನೆ

gururaj gantiholi

ಗಂಗೊಳ್ಳಿ: ಕುಂದಾಪುರ ತಾಲೂಕು ಸರ್ಕಾರಿ ಆಸ್ಪತ್ರೆಗೆ ಸರಿಯಾದ ವಿದ್ಯುತ್ ಪೂರೈಕೆ ಮಾಡದೇ ಇರುವುದು, ವಿದ್ಯುತ್ ಇದ್ದಾಗಲೂ ಐಸಿಯು ಘಟಕ ಮತ್ತು ಔಷಧಗಳನ್ನು ಶೀಥಲೀಕರಣದಲ್ಲಿ ಇಡುವ ವ್ಯವಸ್ಥೆಗೆ ವಿದ್ಯುತ್ ಪೂರೈಕೆ ಮಾಡದೇ ರೋಗಿಗಳಿಗೆ ಸಮಸ್ಯೆಯಾಗುವಂತೆ ಕೆಲವರು ಹುನ್ನಾರ ನಡೆಸುತ್ತಿದ್ದಾರೆ. ಈ ಬಗ್ಗೆ ಜಿಲ್ಲಾಡಳಿತ ತುರ್ತು ಗಮನಹರಿಸಿ ಸಮಸ್ಯೆ ಸರಿಪಡಿಸಬೇಕು ಎಂದು ಶಾಸಕ ಗುರುರಾಜ್ ಗಂಟಿಹೊಳೆ ಆಗ್ರಹಿಸಿದ್ದಾರೆ.

ಸರ್ಕಾರಿ ಆಸ್ಪತ್ರೆ ಐಸಿಯು ಘಟಕಕ್ಕೆ ವಿದ್ಯುತ್ ಪೂರೈಸದೇ ನಿರ್ಲಕ್ಷೃ ತೋರಲಾಗುತ್ತಿದೆ. ಇಡೀ ಸರ್ಕಾರಿ ಆಸ್ಪತ್ರೆ ವ್ಯವಸ್ಥಿತವಾಗಿ ಹಾಳು ಮಾಡುವ ಷಡ್ಯಂತರ ಕೆಲವರು ಮಾಡುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆ ಸರಿಯಾಗಿ ಕೆಲಸ ಮಾಡುತ್ತಿಲ್ಲ ಎನ್ನುವುದನ್ನು ಬಿಂಬಿಸಲು ಹೀಗೆ ಮಾಡಲಾಗುತ್ತಿದೆ. ಮುಂದೇ ಇದೇ ದೊಡ್ಡ ದುರಂತಕ್ಕೂ ಕಾರಣವಾಗಬಹುದು. ಹೀಗಾಗಿ ಜಿಲ್ಲಾಡಳಿತ ಇದನ್ನು ಗಮನಿಸಬೇಕು. ಬಡ ಮತ್ತು ಮಧ್ಯಮ ವರ್ಗದ ರೋಗಿಗಳೆ ಹೆಚ್ಚು ಇಲ್ಲಿಗೆ ಬರುವುದರಿಂದ ಅವರಿಗೆ ಅಗತ್ಯವಾದ ಚಿಕಿತ್ಸೆ ನೀಡಬೇಕು. ಯಾರನ್ನೋ ಓಲೈಸಲು ಅಥವಾ ಇನ್ನಾವುದೋ ದುರುದ್ದೇಶದಿಂದ ಆಸ್ಪತ್ರೆಯಲ್ಲಿ ಇರುವ ವ್ಯವಸ್ಥೆ ಹಾಳು ಮಾಡುವುದು ಸರಿಯಲ್ಲ. ರೋಗಿಗಳಿಗೆ ಅಗತ್ಯವಾಗಿ ಬೇಕಿರುವ ಐಸಿಯು ವ್ಯವಸ್ಥೆ ಮತ್ತು ಔಷಧ ಶೇಖರಿಸಿಡುವ ಘಟಕಕ್ಕೆ ವಿದ್ಯುತ್ ಪೂರೈಕೆ ಮಾಡಬೇಕು. ವೈಯುಕ್ತಿಕ ಹಿತಾಸಕ್ತಿ ಸಾಧನೆಗೆ ಆಸ್ಪತ್ರೆಯಲ್ಲಿನ ವ್ಯವಸ್ಥೆಗೆ ಕುಂದುಂಟು ಮಾಡುವವರ ವಿರುದ್ಧ ಜಿಲ್ಲಾಡಳಿತ ಕ್ರಮ ತೆಗೆದುಕೊಳ್ಳಬೇಕು. ಈ ಭಾಗದ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆ ಮೂಲಕ ಉತ್ತಮ ಗುಣಮಟ್ಟದ ಸೇವೆ ನೀಡುವಂತಾಗಬೇಕು ಎಂದು ಹೇಳಿದ್ದಾರೆ.

Share This Article

ನಿಮ್ಮ ನೆಚ್ಚಿನ ಹಣ್ಣುನ್ನು ಆಯ್ಕೆ ಮಾಡಿ.. ನಿಮ್ಮ ವ್ಯಕ್ತಿತ್ವವನ್ನು ತಿಳಿದುಕೊಳ್ಳಿ!.. Personality Test

Personality Test : ಒಬ್ಬ ವ್ಯಕ್ತಿ ಹೇಗಿದ್ದಾನೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ತುಂಬಾ ಕಷ್ಟ. ವ್ಯಕ್ತಿಯ ವ್ಯಕ್ತಿತ್ವವನ್ನು…

ಚಾಣಕ್ಯ ನೀತಿಯಲ್ಲಿನ ಈ 4 ವಿಷಯಗಳನ್ನು ನೆನಪಿನಲ್ಲಿಡಿ; ಸಂಬಂಧದಲ್ಲಿ ಮೋಸ ಹೋದ ನೋವನ್ನು ನೀವು ಅನುಭವಿಸಬೇಕಿಲ್ಲ.. | Chanakya Niti

ಕಾಲಾನಂತರದಲ್ಲಿ ಜನರ ಬದಲಾಗುತ್ತಿರುವ ಆಲೋಚನೆಗಳಲ್ಲಿ ನಿಜವಾದ ಪ್ರೀತಿ ಕಳೆದುಹೋಗುತ್ತಿದೆ. ಈ ಜಗತ್ತಿನಲ್ಲಿ ನಿಮ್ಮನ್ನು ಉತ್ಸಾಹದಿಂದ ಪ್ರೀತಿಸುವ…

ಹರಳೆಣ್ಣೆ ನೀರಿನಿಂದ ಎಷ್ಟೆಲ್ಲಾ ಪ್ರಯೋಜನ ಇದೆ ಗೊತ್ತಾ?; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ| Health Tips

ಹರಳೆಣ್ಣೆಯನ್ನು ಆರೋಗ್ಯ ಮತ್ತು ಸೌಂದರ್ಯಕ್ಕಾಗಿ ಬಳಸಲಾಗುತ್ತದೆ ಎಂಬುದು ತಿಳಿದಿದೆಯೇ. ಇದರಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಚರ್ಮ…