More

    ನೇಹಾ ಹಿರೇಮಠ ಹತ್ಯೆ ಪ್ರಕರಣ: ಕೊಲೆಗಡುಕನನ್ನು ಗಲ್ಲಿಗೇರಿಸಿ

    ಸಾಗರ: ವಿದ್ಯಾರ್ಥಿನಿ ನೇಹಾ ಹಿರೇಮಠ ಅವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಅಪರಾಧಿ ಫಯಾಜ್‌ನನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿ ವಿಶ್ವ ಹಿಂದು ಪರಿಷತ್, ಭಜರಂಗ ದಳ, ದುರ್ಗಾವಾಹಿನಿ ಮತ್ತು ಮಾತೃಶಕ್ತಿ ಸಂಘಟನೆಗಳ ಪದಾಧಿಕಾರಿಗಳು ಉಪವಿಭಾಗಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಿದರು.

    ವಿಎಚ್‌ಪಿ ಜಿಲ್ಲಾಧ್ಯಕ್ಷೆ ಪ್ರತಿಮಾ ಜೋಗಿ ಮಾತನಾಡಿ, ರಾಜ್ಯದಲ್ಲಿ ಪ್ರೀತಿ ಪ್ರೇಮದ ಹೆಸರಿನಲ್ಲಿ ಬಹುಸಂಖ್ಯಾತ ಹಿಂದು ಹೆಣ್ಣುಮಕ್ಕಳನ್ನು ಲವ್‌ಜಿಹಾದ್ ಬಲೆಗೆ ಬೀಳಿಸಿ ದುರುಪಯೋಗಪಡಿಸಿಕೊಳ್ಳುವ ಜಾಲವೊಂದು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸುತ್ತಿದೆ. ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಎಂಬ ಅಮಾಯಕ ಹುಡುಗಿಯನ್ನು ಅತ್ಯಂತ ಧಾರುಣವಾಗಿ ಹತ್ಯೆ ಮಾಡಲಾಗಿದೆ. ಓರ್ವ ಕಾಂಗ್ರೆಸ್ ಕಾರ್ಪೊರೇಟರ್‌ಗೆ ಕಾಂಗ್ರೆಸ್ ಸರ್ಕಾರದಲ್ಲಿ ನ್ಯಾಯ ಸಿಗುತ್ತಿಲ್ಲ. ಹತ್ಯೆ ಮಾಡಿರುವ ಫಯಾಜ್‌ನನ್ನು ರಾಜ್ಯ ಸರ್ಕಾರ ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿದರು.
    ಜಿಪಂ ಮಾಜಿ ಸದಸ್ಯ ರಾಜಶೇಖರ ಗಾಳಿಪುರ ಮಾತನಾಡಿ, ರಾಜ್ಯದಲ್ಲಿ ಲವ್ ಜಿಹಾದ್ ಹೆಸರಿನಲ್ಲಿ ಹಿಂದು ಹೆಣ್ಣುಮಕ್ಕಳನ್ನು ಬಳಸಿಕೊಂಡು ಕೊಲೆ ಮಾಡುವ ಕೆಟ್ಟ ಪ್ರವೃತ್ತಿ ಹೆಚ್ಚುತ್ತಿದೆ. ಇಂತಹ ನೀಚಪ್ರವೃತ್ತಿಯಲ್ಲಿ ತೊಡಗುವವರಿಗೆ ಕಾಂಗ್ರೆಸ್ ಪಕ್ಷದ ಬೆಂಬಲ ಇದ್ದಂತೆ ತೋರುತ್ತಿದೆ ಎಂದು ದೂರಿದರು.
    ವಕೀಲ ಕೆ.ವಿ.ಪ್ರವೀಣ್, ರೇವಪ್ಪ ಕೆ. ಹೊಸಕೊಪ್ಪ, ಕೆ.ಎಚ್.ಸುದರ್ಶನ್, ಪರಶುರಾಮ್, ಪುಷ್ಪಾ ಪೈ, ನಕ್ಷತ್ರಾ ಪ್ರಕಾಶ್, ಮಂಜುನಾಥ ಗೌಡ, ಪ್ರದೀಪ್ ಆಚಾರಿ ಇತರರಿದ್ದರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts