ಬೆಂಗಳೂರು: ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ನೆಹರು ಓಲೇಕಾರ್ ಅವರಿಗೆ ಕರ್ನಾಟಕ ರಾಜ್ಯ ಅನುಸೂಚಿತ ಜಾತಿ ಮತ್ತು ಪಂಗಡಗಳ ಆಯೋಗದ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಅದೇ ರೀತಿ ಮಾಜಿ ಸಚಿವ ಎಂ.ಶಿವಣ್ಣಗೆ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಸ್ಥಾನ ಕರುಣಿಸಲಾಗಿದೆ.
ತನಗೆ ಸಚಿವ ಸ್ಥಾನ ನೀಡಲೇಬೇಕೆಂದು ಓಲೇಕರ್ ಪಟ್ಟು ಹಿಡಿದು ಪಕ್ಷ ಮತ್ತು ಸಿಎಂ ಮೇಲೆ ಒತ್ತಡ ತಂತ್ರ ಅನುಸರಿಸಿದ್ದರು. ಆದರೆ ಲಂಬಾಣಿ ಸಮುದಾಯದಿಂದ ಪ್ರಭು ಚವಾಣ್ಗೆ ಅವಕಾಶ ನೀಡಿದ್ದರಿಂದ ಒತ್ತಡ ಫಲ ನೀಡಿರಲಿಲ್ಲ. ಇದೀಗ ಆಯೋಗದ ಅಧ್ಯಕ್ಷ ಸ್ಥಾನ ನೀಡಿ ಸಮಾಧಾನ ಪಡಿಸುವ ಪ್ರಯತ್ನ ಮಾಡಲಾಗಿದೆ.
ರಾಯಭಾಗ ಶಾಸಕ ದುರ್ಯೋಧನ ಐಹೊಳೆ ಅವರಿಗೆ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಮಾಯಕೊಂಡ ಶಾಸಕ ಪ್ರೊ.ಎನ್. ಲಿಂಗಣ್ಣ ಅವರಿಗೆ ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮ, ಸಿ.ಮುನಿಕೃಷ್ಣರಿಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮ ಅಧ್ಯಕ್ಷ ಸ್ಥಾನದ ಅವಕಾಶ ನೀಡಲಾಗಿದೆ. ಈ ಮುನ್ನ ಐಹೊಳೆಯವರಿಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮ ನೀಡಲಾಗಿತ್ತು. ಕೊನೇ ಘಳಿಗೆಯಲ್ಲಿ ನಿಗಮ ಬದಲಾಗಿದೆ.
ನಿಖಿಲ್-ಪ್ರಜ್ವಲ್ ಒಟ್ಟಾಗಿ ಯುದ್ಧಕ್ಕೆ ಹೋಗಲಿ..! ಚಿಕ್ಕಪ್ಪ-ದೊಡ್ಡಪ್ಪನ ಎದುರಲ್ಲೇ ಸವಾಲು
ಯಾರೂ ಇಲ್ಲದ ವೇಳೆ ಮನೆಗೆ ಎಂಟ್ರಿ ಕೊಡುತ್ತಿದ್ದಳು, ಈಕೆಯ ಕೃತ್ಯಕ್ಕೆ ಸ್ಥಳೀಯರೇ ಬೆಚ್ಚಿಬಿದ್ದಿದ್ದರು!