ನೆರೆ ಎದುರಿಸಲು ಸಿದ್ಧತೆಯಾಗಲಿ

blank

ಅಥಣಿ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದ ಅಥಣಿ ತಾಲೂಕಿನ ಕೃಷ್ಣಾ ನದಿ ತೀರದ ಸುಮಾರು 22 ಗ್ರಾಮಗಳಿಗೆ ಎದುರಾಗಬಹುದಾದ ನೆರೆಹಾವಳಿ ಎದುರಿಸಲು ತಾಲೂಕಾಡಳಿತ ಸಕಲ ಸಿದ್ಧತೆ ಮಾಡಿಕೊಳ್ಳಬೇಕೆಂದು ಶಾಸಕ ಲಕ್ಷ್ಮಣ ಸವದಿ ಸೂಚನೆ ನೀಡಿದರು.

blank

ತಾಪಂ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ತಾಲೂಕುಮಟ್ಟದ ಅಧಿಕಾರಿಗಳ ಸಭೆ ಉದ್ದೇಶಿಸಿ ಮಾತನಾಡಿದ ಅವರು, 2019 ಮತ್ತು 2021ರಲ್ಲಿ ಆಗಿರುವ ಸಮಸ್ಯೆ ಮರುಕಳಿಸದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು. ಜನ-ಜಾನುವಾರುಗಳಿಗೆ ತೊಂದರೆ ಆಗದಂತೆ ಎಚ್ಚರವಹಿಸಬೇಕು. ಪ್ರವಾಹ ಸಿದ್ದತೆ ಕುರಿತು ನೋಡಲ್ ಅಧಿಕಾರಿಗಳಿಂದ ಮಾಹಿತಿ ಪಡೆದು ಸಕಲ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.

ನೆರೆ ಸಂತ್ರಸ್ತರಿಗೆ ಕಾಳಜಿ ಕೇಂದ್ರ ಆರಂಭಿಸುವ ಮೂಲಕ ಅವರಿಗೆ ಊಟ ಹಾಗೂ ಜನಾನುವಾರುಗಳಿಗೆ ಮೇವಿನ ವ್ಯವಸ್ಥೆ ಮಾಡಬೇಕು. ಪ್ರವಾಹಕ್ಕೆ ಸಿಲುಕುವ ಗ್ರಾಮಸ್ಥರ ಸ್ಥಳಾಂತರ ಹಾಗೂ ವಿದ್ಯುತ್ ವ್ಯವಸ್ಥೆಗೆ ಕ್ರಮ ಕೈಗೊಳಬೇಕು. ಅಸಡ್ಡೆ ತೋರುವ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ನೋಟಿಸ್ ನೀಡಲು ಸೂಚನೆ: ಈಗಾಗಲೆ ತಾಲೂಕಾಡಳಿತದಿಂದ ಗ್ರಾಮಮಟ್ಟದಲ್ಲಿ ನೇಮಿಸಿರುವ ನೋಡಲ್ ಅಧಿಕಾರಿಗಳು ಮತ್ತು ಅವರ ಸಹಾಯಕ ಅಧಿಕಾರಿಗಳು ಸರಿಯಾಗಿ ಕರ್ತವ್ಯ ನಿರ್ವಹಸದೆ ಇರುವುದು ಕಂಡುಬಂದಿದೆ. ಅಲ್ಲದೆ ಸಭೆಗೆ ಗೈರಾಗಿರುವ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿ, ಶಿಸ್ತು ಕ್ರಮ ಕೈಕೊಳ್ಳಲು ತಹಸೀಲ್ದಾರ್ ಸವದಿ ಸೂಚನೆ ನೀಡಿದರು.

ವಿವಿಧ ಗ್ರಾಮಗಳಿಗೆ ಭೇಟಿ: ತಾಲೂಕಿನ ಹಲ್ಯಾಳ, ಹುಲಗಬಾಳಿ, ದರೂರ, ನದಿ ಇಂಗಳಗಾವಿ, ತೀರ್ಥ ಮತ್ತಿತರರ ಗ್ರಾಮಗಳಿಗೆ ಶಾಸಕ ಸವದಿ ಅವರು ಭಾನುವಾರ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ಪ್ರೊಬೇಷನರಿ ಐಎಎಸ್ ಅಧಿಕಾರಿ ದಿನೇಶಕುಮಾರ ಮೀನಾ, ತಹಸೀಲ್ದಾರ್ ವಾಣಿ ಯು., ಜಿಪಂ ಯೋಜನಾಧಿಕಾರಿ ರವಿ ಬಂಗಾರೆಪ್ಪನವರ, ಶಿವಾನಂದ ಕಲ್ಲಾಪುರ, ಶ್ರೀಪಾದ ಜಲ್ದೆ ಮತ್ತಿತರರು ಉಪಸ್ಥಿತರಿದ್ದರು.

Share This Article
blank

ಈ ಗಿಡಗಳನ್ನು ಬೆಳೆಸಿದರೆ ಸಾಕು, ನಿಮ್ಮ ಮನೆಗೆ ಒಂದೇ ಒಂದು ಸೊಳ್ಳೆಯೂ ಬರುವುದಿಲ್ಲ..Plants

Plants: ಮಳೆಗಾಲ ಬಂತೆಂದರೆ ಸಾಕು ಅನೇಕ ಜನರು ತಮ್ಮ ಮನೆಯಂಗಳದಲ್ಲಿ ವಿವಿಧ ಗಿಡಗಳನ್ನ ನೆಡಲು ಪ್ರಾರಂಭಿಸುತ್ತಾರೆ.…

ರಾತ್ರಿ 9 ಗಂಟೆಯ ನಂತರ ಊಟ ಮಾಡ್ತೀರಾ? ಹಾಗಾದ್ರೆ ಈ ಎಲ್ಲಾ ಆರೋಗ್ಯ ಸಮಸ್ಯೆ ಬರಬಹುದು ಎಚ್ಚರ! Health

Health: ನಮ್ಮ ಆಧುನಿಕ ಜೀವನಶೈಲಿಯಲ್ಲಿ, ತಡರಾತ್ರಿ ಕೆಲಸ ಮಾಡುವುದು, ಹೆಚ್ಚು ಮೊಬೈಲ್​ ಬಳಕೆ ಮಾಡುವುದು, ತಡವಾಗಿ…

blank