More

    ನೇಜಾರು ಹತ್ಯೆ ಪ್ರಕರಣ: ಆರೋಪ ನಿರಾಕರಿಸಿದ ಚೌಗುಲೆ

    ಉಡುಪಿ: ನೇಜಾರು ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣದ ಬಗ್ಗೆ ಚಾರ್ಜ್​ಶೀಟ್​ ಸಲ್ಲಿಕೆಯಾದ ಬಳಿಕ ಮೊದಲ ಬಾರಿಗೆ ಆರೋಪಿ ಪ್ರವಿಣ್​ ಚೌಗುಲೆಯನ್ನು ಬುಧವಾರ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರ ಮುಂದೆ ಆರೋಪಿ ತನ್ನ ಮೇಲಿನ ಆರೋಪವನ್ನು ನಿರಾಕರಿಸಿದ್ದಾನೆ.

    ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿದ್ದ ಆರೋಪಿ ಪ್ರವಿಣ್​ ಚೌಗುಲೆಯನ್ನು ಬಿಗಿ ಪೊಲೀಸ್​ ಭದ್ರತೆಯಲ್ಲಿ ಪ್ರಕರಣದ ತನಿಖಾಧಿಕಾರಿ ಮಲ್ಪೆ ಪೊಲೀಸ್​ ವೃತ್ತ ನಿರೀಕ್ಷಕ ಕೃಷ್ಣ ಎಸ್​.ಕೆ. ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಧೀಶ ದಿನೇಶ್​ ಹೆಗ್ಡೆ ಆರೋಪಿ ಮೇಲಿನ ಆಪಾದನೆಯನ್ನು ವಾಚಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಆರೋಪಿ ಚೌಗುಲೆ ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿದ್ದಾನೆ.

    ಏ.5ಕ್ಕೆ ವಿಚಾರಣಾ ಪೂರ್ವ ಸಮಾಲೋಚನೆ
    ಪ್ರಕರಣದ ವಿಚಾರಣೆ ವ್ಯವಸ್ಥಿತವಾಗಿ ನಡೆಸಿ ಸಂತ್ರಸ್ತರಿಗೆ ಶ್ರೀ ನ್ಯಾಯದೊರಕಿಸಿಕೊಡುವ ನಿಟ್ಟಿನಲ್ಲಿ ಏ.5ರಂದು ಪ್ರಿ ಟ್ರಾಯಲ್​ ಕಾನ್ಸರೆನ್ಸ್​ ನಡೆಸಲು ನ್ಯಾಯಾಧೀಶರು ಆದೇಶ ನೀಡಿದ್ದಾರೆ. ನ್ಯಾಯಾಧೀಶರ ಸಮಕ್ಷಮದಲ್ಲಿ ನಡೆಯುವ ಈ ಕಾನ್ಸರೆನ್ಸ್​ನಲ್ಲಿ ಪ್ರಕರಣದ ತನಿಖಾಧಿಕಾರಿ, ವಿಶೇಷ ಪಬ್ಲಿಕ್​ ಪ್ರಾಸಿಕ್ಯೂಟರ್​, ಆರೋಪಿ ಪರ ವಕೀಲರು ಭಾಗವಹಿಸಿ, ಮುಂದಿನ ವಿಚಾರಣೆ ಯಾವ ರೀತಿ ನಡೆಸಬೇಕೆಂಬುದರ ಬಗ್ಗೆ ಚರ್ಚೆ ನಡೆಸಲಿದ್ದಾರೆ. ನಂತರ ವಿಚಾರಣೆಗೆ ಹಾಜರಾಗಲು ಸಾಕ್ಷಿಗಳಿಗೆ ಸಮನ್ಸ್​ ನೀಡಲಾಗುತ್ತದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts