More

    ಸಿಎಂ ಬೊಮ್ಮಾಯಿ ಮಂಡಿಸಿದ ರಾಜ್ಯ ಬಜೆಟ್​ನ ಹೊಸ ಕೊಡುಗೆಗಳೇನು? ಇಲ್ಲಿದೆ ಪಟ್ಟಿ…

    ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಸರ್ಕಾರದ ಅವಧಿಯ ಕೊನೆಯ ಬಜೆಟ್ ಮಂಡನೆ ಮಾಡಿದ್ದಾರೆ. ಹಣಕಾಸು ಖಾತೆಯನ್ನೂ ಹೊಂದಿರುವ ಸಿಎಂ ಬೊಮ್ಮಾಯಿ ಅವರ ಪಾಲಿಗೆ ಇದು 2ನೇ ಬಜೆಟ್​ ಮಂಡನೆ. ಈ ಬಾರಿಯ ಬಜೆಟ್​ ಗಾತ್ರ ಒಟ್ಟು 3 ಲಕ್ಷ 9 ಸಾವಿರ 182 ಕೋಟಿ ರೂ. ಆಗಿದ್ದು, ಮುಂಬುರುವ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಬಾರಿಯ ಬಜೆಟ್ ಮಂಡಿಸಿದ್ದಾರೆ.

    ಸಿಎಂ ಬಸವರಾಜ ಬೊಮ್ಮಾಯಿ ಮಂಡನೆ ಮಾಡಿರುವ ಈ ಬಾರಿಯ ಬಜೆಟ್​ನಲ್ಲಿ ಶಿಕ್ಷಣ, ಆರೋಗ್ಯ, ಕೃಷಿ ಹಾಗೂ ವೈದ್ಯಕೀಯ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ಮೀಸಲಿಟ್ಟಿದ್ದಾರೆ. ಅಂತೆಯೇ ಈ ಬಾರಿಯ ಬಜೆಟ್​ನಲ್ಲಿ ಬೊಮ್ಮಾಯಿ ಘೋಷಣೆ ಮಾಡಿರುವ ಹೊಸ ಯೋಜನೆಗಳ ಪಟ್ಟಿ ಇಂತಿವೆ….

    • – ರೈತ ಸಿರಿ ಯೋಜನೆಯಡಿ ಕಿರುಧಾನ್ಯ ಬೆಳೆಯುವ ರೈತರಿಗೆ ಪ್ರತಿ ಹೆಕ್ಟೇರ್‌ಗೆ 7 10 ಸಾವಿರ ಪ್ರೋತ್ಸಾಹ ಧನ
    • – ರೈತರಿಗೆ ಭೂ ಸಿರಿ ಹೊಸ ಯೋಜನೆಯಡಿಯಲ್ಲಿ 110 ಸಾವಿರ ಹೆಚ್ಚುವರಿ ಸಹಾಯಧನ
    • – ಗೃಹಿಣಿ ಶಕ್ತಿ ಯೋಜನೆಗೆ 46,278 ಕೋಟಿ ರೂ. ಅನುದಾನ ಮೀಸಲು
    • – ಶಾಲಾ-ಕಾಲೇಜುಗಳ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ಹಾಗೂ 100 ಕೋಟಿ ರೂ. ವೆಚ್ಚದಲ್ಲಿ ಶಾಲೆಗೆ ತೆರಳಲು ‘ಮಕ್ಕಳ ಬಸ್’ ಯೋಜನೆ ರೂಪಿಸಲು ಚಿಂತನೆ
    • – ವಿದ್ಯಾವಾಹಿನಿ ಯೋಜನೆಯಡಿ ವಿದ್ಯಾರ್ಥಿನಿಯರಿಗೆ 1350 ಕೋಟಿ ವೆಚ್ಚದಲ್ಲಿ ಉಚಿತ ಬಸ್ ಪಾಸ್ ಸೌಲಭ್ಯ
    • – ಮುಖ್ಯಮಂತ್ರಿ ವಿದ್ಯಾ ಶಕ್ತಿ ಯೋಜನೆಯಡಿ ಪದವಿವರೆಗೂ ರಾಜ್ಯದ ಎಲ್ಲ ಸರ್ಕಾರಿ ಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ
    • – ಬದುಕುವ ದಾರಿ ಯೋಜನೆಯಡಿ ಯುವಜನರಿಗೆ 3 ತಿಂಗಳು ಐಟಿಐ ತರಬೇತಿ
    • – ಯುವಕರು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯುವಕರು ಭಾಗವಹಿಸಲು ಯುವಸ್ನೇಹಿ ಯೋಜನೆಯಡಿ ಗೆ 2 ಸಾವಿರ ರೂ. ಮೀಸಲು.
    • – 100 ಕೋಟಿ ರೂ. ವೆಚ್ಚದಲ್ಲಿ ಶಾಲೆಗೆ ತೆರಳಲು ಮಕ್ಕಳ ಬಸ್ ಯೋಜನೆ ರೂಪಿಸಲು ಚಿಂತನೆ.
    • – ನಮ್ಮ ನೆಲೆ ಯೋಜನೆಯಡಿ ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ನಿವೇಶನ ಹಂಚಿಕೆ
    • – ಮುಖ್ಯಮಂತ್ರಿ ವಿದ್ಯಾ ಶಕ್ತಿ ಯೋಜನೆಯಡಿ ಪದವಿವರೆಗೂ ರಾಜ್ಯದ ಎಲ್ಲ ಸರ್ಕಾರಿ ಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ
    • – ಸಹ್ಯಾದ್ರಿ ಸಿರಿ ಯೋಜನೆ ಮೂಲಕ ಕರಾವಳಿ, ಮಲೆನಾಡು ಹಾಗೂ ಅರೆ ಮಲೆನಾಡಿನಲ್ಲಿ ನೀರು ಸಂರಕ್ಷಣೆ ಹಾಗೂ ತೋಟಗಾರಿಕಾ ಉತ್ಪಾದಕತೆ ಹೆಚ್ಚಿಸಲು ಒಂದು ತೋಟ ಒಂದು ಬೆಳೆ ಯೋಜನೆಗೆ 10 ಕೋಟಿ ರೂ. ಮೀಸಲು.
    • – ಆಳ ಸಮುದ್ರ ಮೀನುಗಾರಿಕೆ ಉತ್ತೇಜನಕ್ಕೆ ಮತ್ಸ ಸಿರಿ ಯೋಜನೆ ಜಾರಿ.
    • – ರೈತರಿಗೆ 75 ಲಕ್ಷ ಬಡ್ಡಿ ರಹಿತ ಸಾಲ
    • – ಸಹಸ್ರ ಸರೋವರ ಯೋಜನೆ ಅಡಿಯಲ್ಲಿ ರಾಜ್ಯದ 1,000 ಸಣ್ಣ ಸರೋವರಗಳ ಅಭಿವೃದ್ಧಿ
    • – ಜಲನಿಧಿ ಯೋಜನೆಯಡಿ ರೈತರ ಜಮೀನುಗಳಲ್ಲಿ ಜಲ ಹೊಂಡ, ಗೋ ಶಾಲೆಗಳ ನಿರ್ಮಾಣಕ್ಕೆ ಪುಣ್ಯ ಕೋಟಿ ದತ್ತು ಯೋಜನೆಗೆ ಹಣಕಾಸು ನೆರವು
    • – ಸ್ವಚೇತನ ಯೋಜನೆಯಡಿ 5 ಸಾವಿರ ಅಂಗವಿಕಲರಿಗೆ ದ್ವಿಚಕ್ರ ವಾಹನ ನೀಡಲು ಕ್ರಮ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts