More

    ನೂತನ ಡಿಸಿ ಗೋಪಾಲಕೃಷ್ಣ ಅಧಿಕಾರ ಸ್ವೀಕಾರ: ನಿರ್ಗಮಿತ ಜಿಲ್ಲಾಧಿಕಾರಿ ಎಸ್.ಅಶ್ವಥಿಗೆ ಬೀಳ್ಕೊಡುಗೆ

    ಮಂಡ್ಯ: ನೂತನ ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಅವರು ಅಧಿಕಾರ ಸ್ವೀಕರಿಸಿದರು. ಪಶು ಸಂಗೋಪನೆ ಇಲಾಖೆಯ ಆಯುಕ್ತರಾಗಿ ವರ್ಗಾವಣೆಯಾಗಿರುವ ಎಸ್.ಅಶ್ವಥಿ ಅವರಿಗೆ ಬೀಳ್ಕೊಡುಗೆ ನೀಡಲಾಯಿತು.
    ಡಾ.ಎಚ್.ಎನ್.ಗೋಪಾಲಕೃಷ್ಣ ಮಾತನಾಡಿ, ಜಿಲ್ಲಾಡಳಿತದ ವತಿಯಿಂದ ರೈತರು ಹಾಗೂ ಸಾರ್ವಜನಿಕರಿಗೆ ಸಂಬಂಧಿಸಿದ ಕೆಲಸ ಕಾರ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಲಾಗುವುದು. ಸಾರ್ವಜನಿಕರು ತಮ್ಮ ಕೆಲಸಗಳಿಗೆ ಜಿಲ್ಲಾ ಮತ್ತು ತಾಲೂಕು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದೆ. ಅವುಗಳನ್ನು ನಿಗದಿತ ಅವಧಿಯಲ್ಲಿ ಫಲಾನುಭವಿಗಳಿಗೆ ತಲುಪಿಸಲಾಗುವುದು. ಜಿಲ್ಲೆಯಲ್ಲಿರುವ ಸಮಸ್ಯೆಗಳನ್ನು ಜಿಲ್ಲಾಡಳಿತ ಒಂದು ತಂಡವಾಗಿ ಕಾರ್ಯ ನಿರ್ವಹಿಸಿ ಪರಿಹರಿಸುತ್ತದೆ. ಈ ಹಿಂದೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಆಯುಕ್ತರಾಗಿ, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ, ಹಾಸನ ಮತ್ತು ಮಂಗಳೂರಿನಲ್ಲಿ ನಗರ ಪಾಲಿಕೆಗಳ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದೇನೆ ಎಂದರು.
    ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಪಾಂಡವಪುರ ಎಸಿ ಬಿ.ಸಿ.ಶಿವಾನಂದಮೂರ್ತಿ, ಮಂಡ್ಯ ಎಸಿ ಐಶ್ವರ್ಯಾ, ಜಿಲ್ಲಾಧಿಕಾರಿ ಕಚೇರಿಯ ಹಿರಿಯ ಸಹಾಯಕ ಸ್ವಾಮಿಗೌಡ, ಜಿಲ್ಲಾ ವಾರ್ತಾಧಿಕಾರಿ ಎಸ್.ಎಚ್.ನಿರ್ಮಲಾ ಇತರರಿದ್ದರು.
    ಆತ್ಮೀಯ ಬೀಳ್ಕೊಡುಗೆ: ಜಿಲ್ಲೆಯಲ್ಲಿ ಒಂದೂವರೆ ವರ್ಷ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿ ವರ್ಗಾವಣೆಗೊಂಡ ಎಸ್.ಅಶ್ವಥಿ ಅವರಿಗೆ ಜಿಲ್ಲಾಡಳಿತ ವತಿಯಿಂದ ಆತ್ಮೀಯವಾಗಿ ಬೀಳ್ಕೊಡುಗೆ ನೀಡಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts