More

    ಅರವಿಂದ ಕೇಜ್ರಿವಾಲ್​ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ಅಧಿಕೃತ ಆಹ್ವಾನ!

    ನವದೆಹಲಿ: ಮತ್ತೊಮ್ಮೆ ದೆಹಲಿ ಮುಖ್ಯಮಂತ್ರಿಯಾಗುತ್ತಿರುವ ಆಪ್​ನ ಅರವಿಂದ ಕೇಜ್ರಿವಾಲ್​ ಅವರು ತಮ್ಮ ಪ್ರಮಾಣವಚನ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಿದ್ದಾರೆ.

    ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ನಂತರ ಕೇಜ್ರಿವಾಲ್ ಅವರ ಮೂರನೇ ಪ್ರಮಾಣವಚನ ಸಮಾರಂಭದಲ್ಲಿ ಯಾವುದೇ ಮುಖ್ಯಮಂತ್ರಿ ಅಥವಾ ಇತರ ರಾಜ್ಯಗಳ ರಾಜಕೀಯ ಮುಖಂಡರನ್ನು ಆಹ್ವಾನಿಸುವುದಿಲ್ಲ ಎಂದು ಆಪ್​ ಹೇಳಿಕೊಂಡಿತ್ತು.

    ದೆಹಲಿಯ ಹೃದಯ ಭಾಗದಲ್ಲಿರುವ ರಾಮಲೀಲಾ ಮೈದಾನದಲ್ಲಿ ಭಾನುವಾರ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ. ಮೂರು ದಿನಗಳ ಹಿಂದೆ ಬಂದ ಚುನಾವಣೆ ಫಲಿತಾಂಶದಲ್ಲಿ ಆಪ್​ ಪಕ್ಷವು ದೆಹಲಿಯ 70 ಸ್ಥಾನಗಳಲ್ಲಿ 62 ಸ್ಥಾನ ತನ್ನದಾಗಿಸಿಕೊಂಡಿತ್ತು.

    ಪ್ರಮಾಣ ವಚನ ಸಮಾರಂಭಕ್ಕೆ ದೆಹಲಿಯಲ್ಲಿರುವ ಪ್ರತಿಯೊಬ್ಬರಿಗೂ ಆಹ್ವಾನವಿದೆ ಎಂದು ಮನೀಶ್ ಸಿಸೋಡಿಯಾ ಹೇಳಿದ್ದರು. ಫಲಿತಾಂಶ ಪ್ರಕಟವಾದ ದಿನ ಅರವಿಂದ ಕೇಜ್ರಿವಾಲ್​ ಅವರು “ದೆಹಲಿ ನಿವಾಸಿಗಳೇ ನೀವು ಅದ್ಭುತವನ್ನೇ ಮಾಡಿದ್ದೀರಿ, ಐ ಲವ್​ ಯು” ಎಂದಿದ್ದರು.

    ಅರವಿಂದ ಕೇಜ್ರಿವಾಲ್​ ಅವರು ತಮ್ಮ ಹಳೇ ತಂಡದೊಂದಿಗೆ ಹೊಸ ಅಧ್ಯಾಯ ಆರಂಭಿಸಲಿದ್ದಾರೆ. ಮೂಲಗಳ ಪ್ರಕಾರ ಯಾವ ಹೊಸಬರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲಾಗುವುದಿಲ್ಲ. ಆದರೆ, ಹೊಸ ಮುಖಗಳಾದ ಆತಿಷ್​ ಮತ್ತು ರಾಘವ್​ ಚಡ್ಡಾ ಅವರಿಗೆ ಅವಕಾಶ ಸಿಕ್ಕರೂ ಆಶ್ಚರ್ಯವಿಲ್ಲ ಎಂಬುದು ಸದ್ಯ ದೆಹಲಿಯಲ್ಲಿ ನಡೆಯುತ್ತಿರುವ ರಾಜಕೀಯ ಚರ್ಚೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts