ಉಡುಪಿ: ನವ ವಿವಾಹಿತ ಜೋಡಿಯೊಂದು ತಮ್ಮ ಮದುವೆಯ ದಿನವನ್ನು ನೆನಪಿನಲ್ಲಿರುವಂತೆ ಮಾಡುವ ಸಲುವಾಗಿ ಸಾರ್ಥಕ ಕೆಲಸವೊಂದನ್ನು ಮಾಡಿದ್ದಾರೆ. ವಿದ್ಯುತ್ ಸಂಪರ್ಕವಿಲ್ಲದೆ ಸಮಸ್ಯೆಯಲ್ಲಿದ್ದ ದಲಿತ ಕುಟುಂಬವೊಂದಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಿ ಮಾನವವೀಯತೆ ಮೆರೆದಿದ್ದಾರೆ.
ಇದನ್ನೂ ಓದಿ: ಯಶ್ ಮಗನ ಹೊಸ ಲುಕ್! ಮಗನ ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್
ಉಡುಪಿ ಜಿಲ್ಲೆಯ ಕನ್ನರ್ಪಾಡಿ ನಿವಾಸಿ ಶರಣ್ ಶೆಟ್ಟಿ, ಮತ್ತು ನವ್ಯ ಶೆಟ್ಟಿ ಈ ವಿಶಿಷ್ಟ ನವದಂಪತಿಗಳು. ದಲಿತ ಸಮುದಾಯದ ಶ್ರೀಮತಿ ಲೀಲಾ ಅವರು ಕಳೆದ 30 ವರ್ಷಗಳಿಂದ ಮನೆಯಲ್ಲಿ ವಿದ್ಯುತ್ ಇಲ್ಲದೆ ಪರದಾಡುತ್ತಿದ್ದರು. ಇದೀಗ ಈ ಜೋಡಿಯ ಮದುವೆಯ ದಿನದಂದು ಲೀಲಾ ಅವರ ಮನೆಗೆ ಹೊಸ ಬೆಳಕು ಬಂದಿದೆ. ಸ್ವತಃ ದಂಪತಿಗಳೇ ಅವರ ಮನೆಗೆ ಬಂದು ವಿದ್ಯುತ್ ಸಂಪರ್ಕವನ್ನು ಉದ್ಘಾಟಿಸಿದ್ದಾರೆ.
ಇದನ್ನೂ ಓದಿ: VIDEO| ಕರ್ನಾಟಕ ಮೂಲದ ವ್ಯಕ್ತಿಯಿಂದ ಉಳಿಯಿತು ಮುಂಬೈ ಪ್ರಯಾಣಿಕನ ಪ್ರಾಣ! ಪೊಲೀಸ್ ಪೇದೆ ಸಾಹಸ ಹೇಗಿದೆ ನೋಡಿ
ಉಡುಪಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಡಿಯಾಳಿ ಮತ್ತು ಆಸರೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಈ ಮನೆಗೆ ವಿದ್ಯುತ್ ಸಂಪರ್ಕ ನೀಡಲಾಗಿದೆ. ಈ ಮನೆಗೆ ತಗಲಿದ ವಿದ್ಯುತ್ ಸಂಪರ್ಕದ ಸಂಪೂರ್ಣ ವೆಚ್ಚವನ್ನು ನವದಂಪತಿಗಳು ಆಸರೆ ಚಾರಿಟೇಬಲ್ ಟ್ರಸ್ಟ್ಗೆ ಹಸ್ತಾಂತರಿಸಿದ್ದಾರೆ. ಉಡುಪಿ ಭಾಷೆಲ್ ಮಿಷನರಿ ಹಾಲಿನಲ್ಲಿ ತಮ್ಮ ಮದುವೆ ಸಂಪ್ರದಾಯ ಮುಗಿದ ತಕ್ಷಣ ನೇರವಾಗಿ ಪೆರಂಪಳ್ಳಿಗೆ ಬಂದು, ಲೀಲಾ ಅವರ ಮನೆಗೆ ಬೆಳಕು ನೀಡಿದ್ದಾರೆ.
ಅಮ್ಮ ಸತ್ತಿಲ್ಲ, ಮಲಗಿದ್ದಾಳೆ! 20 ದಿನದಿಂದ ಶವವನ್ನೇ ಪೂಜಿಸುತ್ತಿರುವ ಮಕ್ಕಳು! ಕಣ್ಣೀರು ತರಿಸುತ್ತೆ ಈ ಮಕ್ಕಳ ನಂಬಿಕೆ