ನಟ ದರ್ಶನ್ ಹೊಸ ಸಿನಿಮಾಗೆ ತಾತ್ಕಾಲಿಕವಾಗಿ ʼಡಿ-57ʼ ಎಂದು ಹೆಸರಿಟ್ಟು ಮುಹೂರ್ತ ಮಾಡಲಾಗಿದ್ದು, ಮಿಲನ ಸಿನಿಮಾದ ಖ್ಯಾತ ನಿರ್ದೇಶಕ ಪ್ರಕಾಶ್ ಈ ಸಿನಿಮಾವನ್ನು ಡೈರೆಕ್ಷನ್ ಮಾಡಲಿದ್ದಾರೆ.
ಈ ಚಿತ್ರದ ಹಾಡುಗಳನ್ನು ಸಂಗೀತ ಸಂಯೋಜನೆ ಅಜನೀಶ್ ಲೋಕನಾಥ್ ಕಂಪೋಸ್ ಮಾಡಲಿದ್ದು, ಈ ಸಿನಿಮಾ ವೈಷ್ಣೋ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಲಿದೆ.
ಗಾಂಧಿ ನಗರದಲ್ಲಿ ದರ್ಶನ್ ಹಾಗೂ ಕಿಚ್ಚ ಸುದೀಪ್ವ ಜತೆಯಲ್ಲಿ ನಟಿಸೊಲಿದ್ದಾರೆ ಎಂಬ ಸುದ್ದಿ ಜೋರಾಗಿಯೇ ಕೇಳಿ ಬರುತ್ತಿದ್ದು, ಮತ್ತೆ ಇಬ್ಬರು ಜೊತೆಯಾಗಿ ನಟಿಸುತ್ತಾರಾ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.
ಇಂದು ಬೆಳಗ್ಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸದ್ದಿಲ್ಲದೆ ಹೊಸ ಸಿನಿಮಾದ ಮುಹೂರ್ತ ನರೆವೇರಿದೆ. ಹಲವಾರು ದಿನಗಳಿಂದ ಹೆಸರಾಂತ ನಿರ್ದೇಶಕ ಪ್ರಕಾಶ್, ಚಾಲೇಂಜಿಂಗ್ ಸ್ಟಾರ್ ದರ್ಶನ್ಗಾಗಿ ಒಂದು ಸಿನಿಮಾ ಮಾಡಲಿದ್ದಾರೆ ಎನ್ನುವ ಸುದ್ದಿ ಹಲವು ತಿಂಗಳಿಂದ ಹರಿದಾಡುತ್ತಿತ್ತು.
ಇದೀಗ ಈ ಸುದ್ದಿ ನಿಜವಾಗಿದ್ದು, ಇವತ್ತು ಬೆಂಗಳೂರಿನ ದೊಡ್ಡ ಮಹಾ ಗಣಪತಿ ದೇವಸ್ಥಾನದಲ್ಲಿ ದರ್ಶನ್ ಅವರ ಹೊಸ ಸಿನಿಮಾದ ಮಹೂರ್ತ ಸದ್ದಿಲ್ಲದೇ ನಡೆದಿದೆ.
ಕ್ರಾಂತಿ ಸಿನಿಮಾ ಇದೇ ವರ್ಷ ರಿಲೀಸ್ ಆಗಿದ್ದು, ದೊಡ್ಡ ಮಟ್ಟಿನ ಯಶಸ್ಸು ಕಂಡಿಲ್ಲ. . ಹಲವಾರು ದಿನಗಳಿಂದ ಹೆಸರಾಂತ ನಿರ್ದೇಶಕ ಪ್ರಕಾಶ್, ಚಾಲೇಂಜಿಂಗ್ ಸ್ಟಾರ್ ದರ್ಶನ್ಗಾಗಿ ಒಂದು ಸಿನಿಮಾ ಮಾಡಲಿದ್ದಾರೆ ಎನ್ನುವ ಸುದ್ದಿ ಹಲವು ತಿಂಗಳಿಂದ ಹರಿದಾಡುತ್ತಿತ್ತು. ಅದೀಗ ಈ ಸುದ್ದಿ ನಿಜವಾಗಿದೆ.