More

    ಭಯೋತ್ಪಾದಕ ಸಂಘಟನೆ ಐಸಿಸ್ ನಂಟು ಪ್ರಕರಣ: ಇನ್ನಿಬ್ಬರು ಶಂಕಿತರ ಬಂಧನ

    ಮಂಗಳೂರು: ಭಯೋತ್ಪಾದಕ ಸಂಘಟನೆಯಾಗಿರುವ ಐಸಿಸ್​ ಜತೆ ನಂಟು ಹೊಂದಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳದವರು ಮುಂದುವರಿಸಿರುವ ಕಾರ್ಯಾಚರಣೆಯಲ್ಲಿ ಇನ್ನಿಬ್ಬರು ಶಂಕಿತರು ಸಿಕ್ಕಿ ಹಾಕಿಕೊಂಡಿದ್ದಾರೆ. ಭಯೋತ್ಪಾದಕ ಹಿನ್ನೆಲೆಯಲ್ಲಿ ಇಬ್ಬರು ಶಂಕಿತರನ್ನು ಎನ್​ಐಎ ಬಂಧಿಸಿದೆ.

    ಶಿವಮೊಗ್ಗದ ಐಸಿಸ್ ನಂಟಿನ ಭಯೋತ್ಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ‌ಒಬ್ಬ ಶಂಕಿತ ಉಗ್ರ ಹಾಗೂ ದಾವಣಗೆರೆಯ ಹೊನ್ನಾಳಿಯಲ್ಲಿ ಇನ್ನೊಬ್ಬ ಶಂಕಿತ ಉಗ್ರನನ್ನು ಪತ್ತೆ ಮಾಡಿ ಬಂಧಿಸಲಾಗಿದೆ. ಮಂಗಳೂರು ಹೊರವಲಯದ ಬಬ್ಬುಕಟ್ಟೆಯ ಮಝೀನ್ ಅಬ್ದುಲ್ ರೆಹಮಾನ್, ದಾವಣಗೆರೆಯ ಹೊನ್ನಾಳಿಯಲ್ಲಿ ನದೀಮ್ ಅಹ್ಮದ್ ಬಂಧಿತ ಆರೋಪಿಗಳು.

    ಶಿವಮೊಗ್ಗದ ಆರೋಪಿ ಮಾಜ್ ಮುನೀರ್ ಜೊತೆ ಮಝಿನ್ ಅಬ್ದುಲ್ ರಹಮಾನ್​ಗೆ ನಂಟು ಇರುವುದು ಕಂಡುಬಂದಿದ್ದು, ಮಾಜ್​ನ ಉಗ್ರ ಚಟುವಟಿಕೆಗಳಿಗೆ ಈತ ಸಹಕರಿಸುತ್ತಿದ್ದ ಎನ್ನಲಾಗಿದೆ. ಇನ್ನೊಬ್ಬ ಆರೋಪಿ ಸೈಯದ್ ಯಾಸಿನ್ ಜತೆ ದಾವಣಗೆರೆಯ ನದೀಮ್ ನಂಟು ಹೊಂದಿದ್ದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ. ಭಾರತದಲ್ಲಿ ಇಸ್ಲಾಮಿಕ್ ಸ್ಟೇಟ್​​ನ ಭಯೋತ್ಪಾದಕ ಚಟುವಟಿಕೆಗಳನ್ನು ಹೆಚ್ಚಿಸಲು ನದೀಮ್ ನೇಮಕಗೊಂಡಿದ್ದ ಎನ್ನಲಾಗಿದೆ.

    ಶಾಸಕರ ಕಾರಿಗೆ ವೃದ್ಧೆ ಬಲಿ!?; ಆಕೆಯ ಸಾವಿಗೆ ನನ್ನ ಕಾರಲ್ಲ, ನಾಯಿ ಕಾರಣ ಎಂದ ಎಂಎಲ್​ಎ

    ಬಟ್ಟೆ ಧರಿಸದೆ ಮಲಗುವುದರಿಂದ ಏನು ಪ್ರಯೋಜನ?; ಇಲ್ಲಿದೆ ಅಧ್ಯಯನದ ಅಂಶಗಳು..

    ‘ನಾನು ಯೂಟ್ಯೂಬರ್ ಆಗಿದ್ದು ಯಾಕೆ?’ ಅಂತ ಖುದ್ದು ಡಾ.ಬ್ರೋ ಅವರೇ ಹಂಚಿಕೊಂಡಿದ್ದಾರೆ ಇಲ್ಲಿ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts