More

    ಮಂಗಳೂರು ಬಾಂಬ್​ ಸ್ಫೋಟ ಪ್ರಕರಣ ಇನ್ನು NIA ಕೈಗೆ…

    ಮಂಗಳೂರು: ಇತ್ತೀಚೆಗೆ ಆರೋಪಿ ಶಾರಿಕ್​ ಇಸ್ಲಾಮಿಕ್​ ಸ್ಟೇಟ್ಸ್​ ಮಾದರಿಯಲ್ಲೇ ಕುಕ್ಕರ್​ ಬಾಂಬ್​ ಹಿಡಿದು ನಿಂತ ಫೋಟೊ ಒಂದು ವೈರಲ್​ ಆಗಿತ್ತು. ಶಾರೀಕ್​ ಕೈಯಲ್ಲಿದ್ದ ಬಾಂಬ್​ಗೆ ಇಡೀ ಬಸ್​ ಸ್ಫೋಟ ಮಾಡುವ ಸಾಮರ್ಥ್ಯ ಇತ್ತು ಎನ್ನುವ ಮಾಹಿತಿಯೂ ಬಹಿರಂಗಗೊಂಡಿತ್ತು. ಇದೀಗ ಈ ಘಟನೆಯ ತನಿಖೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಇಳಿದಿದೆ.

    ಕುಕ್ಕರ್ ಬಾಂಬ್ ಬ್ಲಾಸ್ಟ್​​ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರ ಶಾರೀಕ್​​ನನ್ನು ಬೆಂಬಲಿಸಿ ಇದೀಗ ಇಸ್ಲಾಮಿಕ್​​​ ರೆಸಿಸ್ಟೆನ್ಸ್​ ಕೌನ್ಸಿಲ್​ ಮಾಧ್ಯಮ ಹೇಳಿಕೆಯೊಂದನ್ನು ಬಿಡುಗಡೆ ಮಾಡಿತ್ತು. ಅದರ ಜೊತೆಗೆ ಆತನ ಬಂಧನಕ್ಕೆ ಪ್ರತೀಕಾರವನ್ನೂ ತೆಗೆದುಕೊಳ್ಳುತ್ತೇವೆ ಎನ್ನುವ ರೀತಿಯ ಹೇಳಿಕೆಯನ್ನು ಇಸ್ಲಾಮಿಕ್​​​ ರೆಸಿಸ್ಟೆನ್ಸ್​ ಕೌನ್ಸಿಲ್​ ನೀಡಿತ್ತು.

    ಈ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಪ್ರಕರಣದ ಸಂಪೂರ್ಣ ತನಿಖೆ NIAಗೆ ಹಸ್ತಾಂತರ ಮಾಡಲಅಗುತ್ತಿದೆಯೇ ಎಂಬ ಅನುಮಾನ ಹುಟ್ಟಿಕೊಂಡಿದೆ. ಸದ್ಯ NIAಯ ದೆಹಲಿ ಬ್ರಾಂಚ್ ನಲ್ಲಿ ಪ್ರಕರಣ ದಾಖಲಾಗಿದ್ದು ಶಂಕಿತ ಉಗ್ರ ಶಾರೀಕ್​ ವಿರುದ್ಧ UAPA ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts