ಮುಂಬೈ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಒಡೆತನದ ಮುಂಬೈಯಲ್ಲಿರುವ ಆಸ್ತಿಗಳ ಮೇಲೆ ರಾಷ್ಟ್ರೀಯ ತನಿಖಾ ದಳ ದಾಳಿ ನಡೆಸಿ, ದಾವೂದ್ ಕಂಪನಿ ಮೇಲ್ವಿಚಾರಕ ಸಲೀಂ ಖುರೇಶಿ ಎಂಬುವವನನ್ನು ಬಂಧಿಸಿದೆ.
ಮುಂಬೈನ 12ಕ್ಕೂ ಹೆಚ್ಚು ಸ್ಥಳದಲ್ಲಿ ಎನ್ಐಎ ಭಾನುವಾರ ದಾಳಿ ನಡೆಸಿ ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ದಾವೂದ್ ಇಬ್ರಾಹಿಂ ಒಡೆತನದ ಡಿ ಕಂಪನಿ ಜತೆಗಿನ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎನ್ಸಿಪಿ ಮುಖಂಡ ಹಾಗೂ ಮಹಾರಾಷ್ಟ್ರದ ಸಚಿವ ನವಾಬ್ ಮಲ್ಲಿಕ್ ಅವರನ್ನು ಫೆಬ್ರವರಿ 23ರಂದು ಜಾರಿ ನಿರ್ದೇಶನಾಲಯ ಬಂಧಿಸಿತ್ತು.
ಆ ವೇಳೆ 10ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ನಡೆಸಿ, ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡಿತ್ತು. 1993ರ ಮುಂಬೈ ಸ್ಫೋಟದ ಮಾಸ್ಟರ್ ಮೈಂಡ್ ದಾವೂದ್ ಇಬ್ರಾಹಿಂ, ಆತನ ಸಹೋದರಿ ಹಸೀನಾ ಪಾರ್ಕರ್ ಒಡೆತನದ ಆಸ್ತಿಯ ಮೇಲೂ ದಾಳಿ ನಡೆಸಿತ್ತು. ಮತ್ತೊಬ್ಬ ಭೂಗತ ಪಾತಕಿ ಛೋಟಾ ಶಕೀತ್ ಹತ್ತಿರದ ಸಂಬಂಧಿ ಇಕ್ಬಾಲ್ ಕಸ್ಕರ್ನನ್ನು ಇದೇ ವರ್ಷದ ಆರಂಭದಲ್ಲಿ ಬಂಧಿಸಲಾಗಿತ್ತು. ಸದ್ಯ ಈತ ಜೈಲಿನಲ್ಲಿದ್ದಾನೆ.