ಶ್ರೀನಗರ: ಭಯೋತ್ಪಾದನಾ ಚಟುವಟಿಕೆ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಅಧಿಕಾರಿಗಳು ಸೋಮವಾರ ಶ್ರೀನಗರ ಸೇರಿದಂತೆ ಜಮ್ಮು ಮತ್ತು ಕಾಶ್ಮೀರದ 9 ಕಡೆ ದಾಳಿ ನಡೆಸಿದ್ದಾರೆ.
ಇದನ್ನೂ ಓದಿ: ಜೈಲ್ ಅನುಭವ ಬಿಚ್ಚಿಟ್ಟ ಸೋನುಗೌಡ? ಈ ಚೆಲುವೆಯ ಅಕೌಂಟ್ನಲ್ಲಿ ಎಷ್ಟಿದೆ? ಎಷ್ಟು ದುಡಿಯುತ್ತಿದ್ದಾಳೆ? ವಿವರ ಇಲ್ಲಿದೆ..
ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ 9 ಸ್ಥಳಗಳಲ್ಲಿ ಭದ್ರತಾ ಪಡೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಪಾಕಿಸ್ತಾನ್ ಮೂಲದ ಉಗ್ರಗಾಮಿ ಸಂಘಟನೆಗಳಾದ ಲಷ್ಕರ್ ಎ ತಯ್ಬಾ, ಜೈಷ್ ಎ ಮೊಹಮ್ಮದ್, ಹಿಬ್ಬುಲ್ ಮುಜಾಹಿದ್ದೀನ್, ಅಲ್ ಬದರ್, ಅಲ್ ಖೈದಾಗಳು ರೂಪಿಸಿರುವ ವಿಧ್ವಂಸಕ ಕೃತ್ಯಗಳನ್ನು ತಡೆಯಲು ಎನ್ ಐಎ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಇತ್ತೀಚೆಗೆ ರೂಪುಗೊಂಡಿರುವ ರೆಸಿಸ್ಟೆನ್ಸ್ ಫ್ರಂಟ್, ಯುನೈಟೆಡ್ ಲಿಬರೇಶನ್ ಫ್ರಂಟ್ ಜಮ್ಮು ಮತ್ತು ಕಾಶ್ಮೀರ, ಮುಜಾಹಿದ್ದೀನ್ ಗಜ್ಞಾತ್ ಉಲ್ ಹಿಂದ್, ಜಮ್ಮು ಮತ್ತು ಕಾಶ್ಮೀರ ಫ್ರೀಡಂ ಫೈಟರ್ಸ್, ಕಾಶ್ಮೀರ್ ಟೈಗರ್ಸ್ ಮತ್ತಿತರ ಸಂಘಟನೆಗಳ ಸಂಚುಗಳನ್ನು ಭೇದಿಸಲು ಎಎನ್ಐ ಈ ಕಾರ್ಯಾಚರಣೆ ನಡೆಸುತ್ತಿದೆ.
ದಾಳಿ ಹಿನ್ನೆಲೆಯಲ್ಲಿ ಕಣಿವೆ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ನವೀಕರಿಸಿದ ಅಮೆರಿಕಾ ಬಂಗಲೆಗೆ ಪ್ರಿಯಾಂಕಾ ಚೋಪ್ರಾ ದಂಪತಿ.. ಇದರ ಮೌಲ್ಯ ಎಷ್ಟು ಸಾವಿರ ಕೋಟಿ ಗೊತ್ತೇ?