ಉತ್ತರಕನ್ನಡ/ತುಮಕೂರು: ಭಟ್ಕಳದ ಇಬ್ಬರು ಸಹೋದರರು ಹಾಗೂ ತುಮಕೂರಿನ ಒಬ್ಬ ವಿದ್ಯಾರ್ಥಿಯನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಇಂದು ವಶಕ್ಕೆ ಪಡೆದಿದ್ದು, ಮೂವರನ್ನೂ ಇವತ್ತೇ ಬಿಟ್ಟು ಕಳುಹಿಸಿದೆ.
ಭಯೋತ್ಪಾದಕ ಸಂಘಟನೆ ಜತೆ ನಂಟಿರುವ ಶಂಕೆಯ ಮೇರೆಗೆ ಭಟ್ಕಳದ ಅಬ್ದುಲ್ ಮುಖ್ತದೀರ್ ಮತ್ತು ಆತನ ಸಹೋದರನನ್ನು ಇಂದು ಬೆಳಗಿನ ಜಾವ ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಮತ್ತೊಂದೆಡೆ ತುಮಕೂರಿನ ಹೆಚ್ಎಂಎಸ್ ಯುನಾನಿ ಮೆಡಿಕಲ್ ಕಾಲೇಜ್ ವಿದ್ಯಾರ್ಥಿ ಸಾಜೀನ್ ಎಂಬಾತನನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ದೆಹಲಿ ಹಾಗೂ ಬೆಂಗಳೂರಿನ ಎನ್ಐಎ ತಂಡ ಇವರನ್ನು ವಶಕ್ಕೆ ಪಡೆದಿತ್ತು.
ಬೆಳಗ್ಗೆಯಿಂದ ಈವರೆಗೆ ಇವರನ್ನು ಗೌಪ್ಯಸ್ಥಳದಲ್ಲಿ ವಿಚಾರಣೆಗೆ ಒಳಪಡಿಸಲಾಗಿತ್ತು. ಮುಖ್ತದೀರ್ನ ಮೊಬೈಲ್ಫೋನ್ ಡೇಟಾ ಹಾಗೂ ಇತರ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಹಾಗೆಯೇ ಸಾಜಿದ್ಗೆ ಸೇರಿದ್ದ ಮೊಬೈಲ್ಫೋನ್ ಮತ್ತು ಲ್ಯಾಪ್ಟಾಪ್ ವಶಕ್ಕೆ ಪಡೆದಿದ್ದರು. ಆದರೆ ಶಂಕೆಗೆ ಪೂರಕ ಅಂಶ ಸಿಗದ ಕಾರಣದಿಂದ ಮೂವರನ್ನೂ ಬಿಟ್ಟು ಕಳುಹಿಸಿದ್ದಾರೆ.
ಪ್ರೇಮಿಯೇ ಪ್ರೇಯಸಿಯ ರುಂಡ ಕಡಿದ ಪ್ರಕರಣ; ಕೊಲೆಗೆ ಸಹಕರಿಸಿದ್ದ ತಂದೆ, ಮದ್ವೆ ಮಾಡಿಸಿದ್ದ ತಾಯಿಯ ಬಂಧನ..
ಬುಲೆಟ್ನ ಹಿಂದೊಂದು ನಂಬರ್, ಮುಂದೊಂದು ನಂಬರ್; 29 ಸಾವಿರ ರೂ. ದಂಡ, ಬೈಕ್ ಸವಾರ ಅಂದರ್