ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ವಿವಾಹದ ಸಿದ್ಧತೆ ನಡೆಯುತ್ತಿದೆ.
ಅಂದವಾಗಿ ಮುದ್ರಿಸಿದ ವಿವಾಹ ಆಮಂತ್ರಣ ಪತ್ರಿಕೆಯನ್ನು ಪದ್ಮನಾಭನಗರದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಮನೆಯಲ್ಲಿ ದೇವರ ಮುಂದೆ ಇಟ್ಟು ಪೂಜೆ ನೆರವೇರಿಸಲಾಯಿತು. ದೇವೇಗೌಡ ದಂಪತಿ, ಎಚ್.ಡಿ.ಕುಮಾರಸ್ವಾಮಿ ಹಾಗೂ ಡಾ.ಚಂದ್ರಶೇಖರ್ ಇದ್ದರು.
ಪೂಜೆ ನಂತರ ಮೊದಲ ಆಮಂತ್ರಣ ಪತ್ರಿಕೆಯನ್ನು ದೇವೇಗೌಡ ದಂಪತಿ ಡಾ. ಚಂದ್ರಶೇಖರ್ ಅವರಿಗೆ ನೀಡಿದರು ಎಂದು ತಿಳಿದು ಬಂದಿದೆ.
ನಿಖಿಲ್ ಹಾಗೂ ರೇವತಿ ಲಗ್ನ ಪತ್ರಿಕೆಗಳನ್ನು ಅಭಿಮಾನಿಗಳು ಹಾಗೂ ಕಾರ್ಯಕರ್ತರು ತಮ್ಮ ಅನಿಸಿಕೆಯಂತೆ ಮುದ್ರಿಸಿಕೊಂಡಿದ್ದಾರೆ. ಪುತ್ರನ ವಿವಾಹಕ್ಕೆ ಎಲ್ಲ ರಾಜ್ಯಗಳ ಸಿಎಂ ಹಾಗೂ ಪ್ರಧಾನಿ ಮೋದಿ ಅವರನ್ನು ಆಮಂತ್ರಿಸುತ್ತೇನೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ರಾಮನಗರ ಹಾಗೂ ಚನ್ನಪಟ್ಟಣ ನಡುವೆ ಇರುವ ಜಾನಪದ ಲೋಕ ಬಳಿಯ ಸಪ್ತಪದಿ ಮಂಟಪದಲ್ಲಿ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಅವರ ವಿವಾಹ ಏ.17ರಂದು ನಡೆಯಲಿದೆ. (ದಿಗ್ವಿಜಯ ನ್ಯೂಸ್)