More

    ನಿಖಿಲ್​ ಕುಮಾರಸ್ವಾಮಿ-ರೇವತಿ ವಿವಾಹ ಆಮಂತ್ರಣ ಪತ್ರಿಕೆಗೆ ಪೂಜೆ ಸಲ್ಲಿಸಿದ ಎಚ್​.ಡಿ. ದೇವೇಗೌಡ ದಂಪತಿ

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್​ ಕುಮಾರಸ್ವಾಮಿ ಅವರ ವಿವಾಹದ ಸಿದ್ಧತೆ ನಡೆಯುತ್ತಿದೆ.

    ಅಂದವಾಗಿ ಮುದ್ರಿಸಿದ ವಿವಾಹ ಆಮಂತ್ರಣ ಪತ್ರಿಕೆಯನ್ನು ಪದ್ಮನಾಭನಗರದ ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಅವರ ಮನೆಯಲ್ಲಿ ದೇವರ ಮುಂದೆ ಇಟ್ಟು ಪೂಜೆ ನೆರವೇರಿಸಲಾಯಿತು. ದೇವೇಗೌಡ ದಂಪತಿ, ಎಚ್​.ಡಿ.ಕುಮಾರಸ್ವಾಮಿ ಹಾಗೂ ಡಾ.ಚಂದ್ರಶೇಖರ್​ ಇದ್ದರು.

    ಪೂಜೆ ನಂತರ ಮೊದಲ ಆಮಂತ್ರಣ ಪತ್ರಿಕೆಯನ್ನು ದೇವೇಗೌಡ ದಂಪತಿ ಡಾ. ಚಂದ್ರಶೇಖರ್​ ಅವರಿಗೆ ನೀಡಿದರು ಎಂದು ತಿಳಿದು ಬಂದಿದೆ.

    ನಿಖಿಲ್​ ಹಾಗೂ ರೇವತಿ ಲಗ್ನ ಪತ್ರಿಕೆಗಳನ್ನು ಅಭಿಮಾನಿಗಳು ಹಾಗೂ ಕಾರ್ಯಕರ್ತರು ತಮ್ಮ ಅನಿಸಿಕೆಯಂತೆ ಮುದ್ರಿಸಿಕೊಂಡಿದ್ದಾರೆ. ಪುತ್ರನ ವಿವಾಹಕ್ಕೆ ಎಲ್ಲ ರಾಜ್ಯಗಳ ಸಿಎಂ ಹಾಗೂ ಪ್ರಧಾನಿ ಮೋದಿ ಅವರನ್ನು ಆಮಂತ್ರಿಸುತ್ತೇನೆ ಎಂದು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

    ರಾಮನಗರ ಹಾಗೂ ಚನ್ನಪಟ್ಟಣ ನಡುವೆ ಇರುವ ಜಾನಪದ ಲೋಕ ಬಳಿಯ ಸಪ್ತಪದಿ ಮಂಟಪದಲ್ಲಿ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಅವರ ವಿವಾಹ ಏ.17ರಂದು ನಡೆಯಲಿದೆ. (ದಿಗ್ವಿಜಯ ನ್ಯೂಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts