More

    ನಿಖಿಲ್ ಈಗ ಯದುವೀರ; ಹುಟ್ಟುಹಬ್ಬ ದಿನದಂದೇ ಶೀರ್ಷಿಕೆ ಅನಾವರಣ

    ಬೆಂಗಳೂರು: ‘ರೈಡರ್’ ಸಿನಿಮಾ ಗುಂಗಿನಲ್ಲಿದ್ದ ನಟ ನಿಖಿಲ್ ಕುಮಾರಸ್ವಾಮಿ ಅದರಿಂದ ಆಚೆ ಬಂದು, ಈಗಾಗಲೇ ಹೊಸ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಶನಿವಾರ, ನಿಖಿಲ್ ಹುಟ್ಟುಹಬ್ಬದ ಪ್ರಯುಕ್ತ ಈ ಹೊಸ ಚಿತ್ರದ ಫಸ್ಟ್ ಲುಕ್ ಅನಾವರಣವಾಗಿದ್ದು, ಚಿತ್ರಕ್ಕೆ ‘ಯದುವೀರ’ ಎಂಬ ಶೀರ್ಷಿಕೆ ಇಡಲಾಗಿದೆ.

    ಈ ಹಿಂದೆ ‘ಮಫ್ತಿ’, ‘ಮಾಸ್ಟರ್ ಪೀಸ್’ ಸೇರಿ ಹಲವು ಚಿತ್ರಗಳಿಗೆ ಅಸೋಸಿಯೇಟ್ ನಿರ್ದೇಶಕರಾಗಿ ಕೆಲಸ ಮಾಡಿದ್ದ ಮಂಜು ಅಥರ್ವ ‘ಯದುವೀರ’ ಚಿತ್ರದ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕನಾಗಿ ಬಡ್ತಿ ಪಡೆಯುತ್ತಿದ್ದಾರೆ. ಇದುವರೆಗೂ ಫ್ಯಾಮಿಲಿ ಚಿತ್ರಗಳಲ್ಲೇ ಹೆಚ್ಚು ಗುರುತಿಸಿಕೊಂಡಿದ್ದ ನಿಖಿಲ್, ಈ ಚಿತ್ರದಲ್ಲಿ ಪಕ್ಕಾ ಮಾಸ್ ಮತ್ತು ಆಕ್ಷನ್ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

    ಈಗಾಗಲೇ ಸದ್ದಿಲ್ಲದೆ ಶೂಟಿಂಗ್ ಸಹ ಶುರುವಾಗಿದ್ದು, ಇನ್ನುಳಿದ ತಾರಾಗಣದಲ್ಲಿ ಯಾರೆಲ್ಲ ಇರಲಿದ್ದಾರೆ ಎಂಬುದು ಇನ್ನಷ್ಟೇ ಬಹಿರಂಗವಾಗಬೇಕಿದೆ. ಈಗಾಗಲೇ ‘ಸಖತ್’ ಸಿನಿಮಾ ನಿರ್ಮಾಣ ಮಾಡಿರುವ ಕೆವಿಎನ್ ಪ್ರೊಡಕ್ಷನ್ಸ್ ಬ್ಯಾನರ್​ನಡಿ ನಿಶಾ ವೆಂಕಟ್ ಕೋನಂಕಿ ಮತ್ತು ಸುಪ್ರಿತ್ ಚಿತ್ರ ನಿರ್ವಿುಸುತ್ತಿದ್ದಾರೆ. ನವೀನ್ ಕುಮಾರ್ ಛಾಯಾಗ್ರಹಣ, ಅಜನೀಶ್ ಲೋಕನಾಥ್ ಸಂಗೀತ ಈ ಚಿತ್ರಕ್ಕಿದೆ.

    ಇವ ಸೆಂಟಿಮೆಂಟಲ್ ಕಳ್ಳ; ಅಬ್ಬಬ್ಬಾ.. ಕದಿಯೋದ್ರಲ್ಲೂ ಏನ್​ ಶಿಸ್ತು!: ಈತ ಅಂಥ ವಾಹನ ಕದಿಯುತ್ತಿರಲಿಲ್ಲ, ಕದ್ದಿದ್ದನ್ನು ಮಾರುತ್ತಿರಲಿಲ್ಲ..!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts