More

    ನಿರ್ಭಯಾ ಪ್ರಕರಣದ ಅಪರಾಧಿ ಸಲ್ಲಿಸಿದ್ದ ದಯಾ ಅರ್ಜಿಯನ್ನು ರಾಷ್ಟ್ರಪತಿಗೆ ಕಳುಹಿಸಿಕೊಟ್ಟ ಗೃಹ ಸಚಿವಾಲಯ

    ನವದೆಹಲಿ: ನಿರ್ಭಯಾ ಪ್ರಕರಣದ ಅಪರಾಧಿಗಳಲ್ಲೊಬ್ಬಮುಕೇಶ್​ ಕುಮಾರ್​ ಸಲ್ಲಿಸಿದ್ದ ದಯಾ ಅರ್ಜಿಯನ್ನು ಗೃಹ ಸಚಿವಾಲಯ ರಾಷ್ಟ್ರಪತಿ ರಾಮನಾಥ ಕೋವಿಂದ ಅವರಿಗೆ ಕಳುಹಿಸಿಕೊಟ್ಟಿದೆ.

    ದಯಾ ಅರ್ಜಿಯನ್ನು ತಿರಸ್ಕರಿಸಲು ಶಿಫಾರಸಿನೊಂದಿಗೆ ರಾಷ್ಟ್ರಪತಿ ಅವರಿಗೆ ಕಳುಹಿಸಲಾಗಿದೆ. ಮಂಗಳವಾರ ಸುಪ್ರೀಂಕೋರ್ಟ್​ ಮುಕೇಶ್​ ಕುಮಾರ್ ಕ್ಯುರೇಟಿವ್​ ಅರ್ಜಿಯನ್ನು ತಿರಸ್ಕರಿಸಿದ ಬಳಿಕ ದಯಾ ಅರ್ಜಿ ಸಲ್ಲಿಸಿದ್ದ.

    ತಿಹಾರ್ ಜೈಲು ಆಡಳಿತದ ಪರ ನ್ಯಾಯವಾದಿ ರಾಹುಲ್ ಮೆಹ್ರಾ ಅಫಿಡವಿಟ್ ಸಲ್ಲಿಸಿದ್ದು, ರಾಷ್ಟ್ರಪತಿಗಳು ದಯಾ ಅರ್ಜಿಯನ್ನು ತಿರಸ್ಕರಿಸಿದ ಬಳಿಕವಷ್ಟೇ ಅಪರಾಧಿಗಳನ್ನು ಗಲ್ಲಿಗೇರಿಸುವುದು ಸಾಧ್ಯ. ಹಾಗಾಗಿ ಗಲ್ಲಿಗೇರಿಸುವ ಹೊಸ ದಿನಾಂಕವನ್ನು ತಿಳಿಸಬೇಕು ಎಂದು ಕೊರ್ಟ್​ಗೆ ಮನವಿ ಮಾಡಿಕೊಂಡಿದ್ದರು.

    ವಿಳಂಬದ ಬಗ್ಗೆ ಬೇಸರ ವ್ಯಕ್ತಪಡಿಸಿರುವ ನಿರ್ಭಯಾ ತಾಯಿ, ಅವರಿಗೆ ಹಕ್ಕುಗಳಿರಬೇಕಾದರೆ, ನಮಗೂ ನ್ಯಾಯಕ್ಕಾಗಿ ಹೋರಾಡುವ ಹಕ್ಕಿದೆ. ನನ್ನ ಮಗಳು ಮೃತ ಪಟ್ಟ 7 ವರ್ಷದಿಂದ ನಾವು ನ್ಯಾಯವನ್ನೇ ಕೇಳುತ್ತಿದ್ದೇವೆ ಎಂದಿದ್ದಾರೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts