More

    ನಿರ್ಭಯಾ ಪ್ರಕರಣ: ಗಲ್ಲುಶಿಕ್ಷೆಯನ್ನು ಜೀವಾವಧಿಗೆ ಪರಿವರ್ತಿಸಲು ಕೋರಿ ಕ್ಯುರೇಟಿವ್​ ಅರ್ಜಿ ಸಲ್ಲಿಸಿದ ಪವನ್​ ಗುಪ್ತ

    ನವದೆಹಲಿ: ನಿರ್ಭಯಾ ಪ್ರಕರಣದ ಅಪರಾಧಿ ಪವನ್​ ಗುಪ್ತ ಸುಪ್ರೀಂಕೋರ್ಟ್​ಗೆ ಶುಕ್ರವಾರ ಕ್ಯುರೇಟಿವ್​​ ಅರ್ಜಿಯನ್ನು ಸಲ್ಲಿಸಿದ್ದಾನೆ. ಈಗಾಗಲೇ ಮೂವರು ಅಪರಾಧಿಗಳು ಸಲ್ಲಿಸಿದ್ದ ಕ್ಯುರೇಟಿವ್​ ಅರ್ಜಿಯನ್ನು ಕೋರ್ಟ್​ ತಿರಸ್ಕರಿಸಿದ್ದು, ಮಾರ್ಚ್​ 3ರಂದು ಅಪರಾಧಿಗಳಿಗೆ ಗಲ್ಲುಶಿಕ್ಷೆ ನಿಗದಿಯಾಗಿದೆ.

    ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸುವಂತೆ ಅಪರಾಧಿ ಪವನ್​ ಗುಪ್ತ ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದಾನೆ. ಈಗಾಗಲೇ ಗಲ್ಲುಶಿಕ್ಷೆ ಎರಡು ಬಾರಿ ಮುಂದಕ್ಕೆ ಹೋಗಿದ್ದು, ಈ ತಿಂಗಳ ಆರಂಭದಲ್ಲಿ ಪಟಿಯಾಲ ಹೌಸ್​ ಕೋರ್ಟ್​ ಹೊಸದಾಗಿ ಡೆತ್​ ವಾರೆಂಟ್​ ಅನ್ನು ವಿತರಿಸಿದೆ.

    ಕಳೆದ ಮಂಗಳವಾರ ನ್ಯಾಯಮೂರ್ತಿ ಆರ್​. ಭಾನುಮತಿ, ಅಶೋಕ್​ ಭೂಷಣ್​ ಮತ್ತು ನವೀನ್​ ಸಿನ್ಹಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಮುಂದೂಡಿತ್ತು. ಎಲ್ಲ ಅಪರಾಧಿಗಳನ್ನು ಒಟ್ಟಿಗೆ ಗಲ್ಲಿಗೇರಿಸಬೇಕೆಂದು ದೆಹಲಿ ಹೈಕೋರ್ಟ್​ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಅರ್ಜಿ ಸಲ್ಲಿಸಿತ್ತು. ನಿರ್ಭಯಾ ಪಾಲಕರು ಕೂಡ ಇದನ್ನೇ ಪ್ರಶ್ನಿಸಿ ಅರ್ಜಿ ದಾಖಲಿಸಿದ್ದಾರೆ.

    ಈ ಸಂಬಂಧ ಸುಪ್ರೀಂಕೋರ್ಟ್​ ಮಾ.5 ರಂದು ವಿಚಾರಣೆ ನಡೆಸುವುದಾಗಿ ಹೇಳಿದ್ದು, ಈಗಾಗಲೇ ಮಾ.3 ರಂದು ಅಪರಾಧಿಗಳನ್ನು ಗಲ್ಲಿಗೇರಿಸಲು ಹೊರಡಿಸಿರುವ ವಾರಂಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts