More

    ನಿರ್ಭೀತಿಯಿಂದ ಮತ ಚಲಾಯಿಸಿ – ಚುನಾವಣಾಧಿಕಾರಿ ಡಾ.ನಯನ ಸಲಹೆ

    ಕಂಪ್ಲಿ: ಆಮಿಷಕ್ಕೆ ಒಳಗಾಗದೆ ನಿರ್ಭೀತಿಯಿಂದ ಮತದಾನ ಮಾಡಬೇಕು ಎಂದು ಚುನಾವಣಾಧಿಕಾರಿ ಡಾ.ನಯನಾ ಹೇಳಿದರು.

    ಪಟ್ಟಣದಲ್ಲಿ ತಾಲೂಕು ಸ್ವೀಪ್ ಸಮಿತಿ, ತಾಲೂಕು ಆಡಳಿತ, ಪುರಸಭೆ ಆಶ್ರಯದಲ್ಲಿ ಮತದಾನದ ಜಾಗೃತಿಗಾಗಿ ಹಮ್ಮಿಕೊಂಡಿದ್ದ ಅಂಗವಿಕಲರ ತ್ರಿಚಕ್ರ ಹಾಗೂ ಸರ್ಕಾರಿ ನೌಕರರ ಬೈಕ್ ಜಾಥಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು. ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಆಶಯಗಳನ್ನು ಬಲಪಡಿಸಬೇಕಿದೆ ಎಂದರು.

    ಇದನ್ನೂ ಓದಿ: ಕಡ್ಡಾಯವಾಗಿ ಮತ ಚಲಾಯಿಸಿ

    ತಾಪಂ ಇಒ ಕೆ.ಎಸ್.ಮಲ್ಲನಗೌಡ ಮತದಾನ ಪ್ರತಿಜ್ಞಾ ವಿಧಿ ಬೋಧಿಸಿದರು. ಡಿಟಿ ಬಿ.ರವೀಂದ್ರಕುಮಾರ್, ಆರೋಗ್ಯ ನಿರೀಕ್ಷಣಾಧಿಕಾರಿ ಪಿ.ಬಸವರಾಜ್, ಇಸಿಒ ಜಿ.ವೀರೇಶ್, ಸಿಆರ್‌ಪಿಗಳಾದ ರೇಣುಕಾರಾಧ್ಯ, ಭೂಮೇಶ್ವರ, ಹನುಮಂತಪ್ಪ, ವೀರೇಶ್, ಸುರೇಶ್ ಸೇರಿ ವಿವಿಧ ತಾಲೂಕು ಮಟ್ಟದ ಅಧಿಕಾರಿಗಳಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts