ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಭಾರತೀಯ ಜನತಾ ಪಕ್ಷ ಇದೀಗ ಬಿಡುಗಡೆ ಮಾಡಿದ್ದು, ಈ ಸಲ ಕನ್ನಡ ಚಿತ್ರರಂಗಕ್ಕೂ ಒಂದು ಸಂತಸ ಸಂಗತಿ ಬಂದಿದೆ.
ಬಿಜೆಪಿ ಹೊರಡಿಸಿರುವ ಪಟ್ಟಿ ಒಂದು ಮಟ್ಟಿಗೆ ನಿರೀಕ್ಷಿತ ಎನಿಸಿಕೊಂಡಿದ್ದರೆ, ಮತ್ತೊಂದು ರೀತಿಯಲ್ಲಿ ಅಚ್ಚರಿ ಎಂಬಂತೆಯೂ ಆಗಿದೆ. ಏಕೆಂದರೆ ಬಹುತೇಕರ ನಿರೀಕ್ಷೆಯಂತೆ ಪಟ್ಟಿಯಲ್ಲಿ ನಿರ್ಮಲಾ ಸೀತಾರಾಮನ್ ಹೆಸರು ಒಂದಾಗಿದ್ದರೆ, ಇನ್ನು ಅಚ್ಚರಿ ಎಂಬ ರೀತಿಯಲ್ಲಿ ನಟ ನವರಸ ನಾಯಕ ಜಗ್ಗೇಶ್ ಹೆಸರನ್ನೂ ಸೂಚಿಸಲಾಗಿದೆ.
ಇನ್ನು ನಿರ್ಮಲಾ ಸೀತಾರಾಮನ್ ಆಯ್ಕೆಯನ್ನು ಊಹಿಸಿದ್ದ ಕಾಂಗ್ರೆಸ್, ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಕಾಣಿಕೆ ಏನು ಎಂದು ಈಗಾಗಲೇ ಕಾಂಗ್ರೆಸ್ ನಾಯಕರು ಪ್ರಶ್ನಿಸಿದ್ದು, ವೈರಲ್ ಆಗಿತ್ತು. ಆದರೆ ಅದ್ಯಾವುದಕ್ಕೂ ಕೇರೇ ಎನ್ನದ ಬಿಜೆಪಿ ನಿರ್ಮಲಾ ಸೀತಾರಾಮನ್ ಅವರನ್ನು ಅಭ್ಯರ್ಥಿಗಳಲ್ಲಿ ಒಬ್ಬರನ್ನಾಗಿ ಆಯ್ಕೆ ಮಾಡಿದೆ. ಸದ್ಯಕ್ಕೆ ಇಬ್ಬರ ಹೆಸರು ಮಾತ್ರ ಘೋಷಣೆ ಮಾಡಿರುವ ಬಿಜೆಪಿ, ಮೂರನೇ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವುದು ಬಹುತೇಕ ಅನುಮಾನ ಎನ್ನಲಾಗಿದೆ.
ಆಧಾರ್ ಕಾರ್ಡ್ ಫೋಟೋ ಹಂಚಿಕೊಳ್ಳಬಾರದಂತೆ, ನಿಜನಾ?: ಆಧಾರ್ ಪ್ರಾಧಿಕಾರದಿಂದ ಹೊರಬಿತ್ತು ಮತ್ತೊಂದು ಪತ್ರಿಕಾ ಹೇಳಿಕೆ..