ಬಣಕಲ್: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮೂಡಿಗೆರೆಯಲ್ಲಿ ಏರ್ಪಡಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಂಗಳೂರಿಗೆ ಪ್ರಯಾಣಿಸುವ ಮಾರ್ಗ ಮಧ್ಯೆ ಕೊಟ್ಟಿಗೆಹಾರದಲ್ಲಿ ನೀರುದೋಸೆ ಸವಿದರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಮುಖಂಡರಾದ ದೀಪಕ್ ದೊಡ್ಡಯ್ಯ, ತಮ್ಮೇಶ್ಗೌಡ, ಪರೀಕ್ಷಿತ್, ತಾರೇಶ್, ಸುನೀಲ್ ಮಣ್ಣಿಕೆರೆ, ವೇಣುಗೋಪಾಲ್ ಪೈ ಮುಂತಾದವರು ಇದ್ದರು.