More

    ‘ಉಹೂಂ, ಇದು ನನ್ನ ಕೊನೆಯ ಚುನಾವಣೆ ಅಲ್ಲವೇ ಅಲ್ಲ’, ಗೆದ್ದ ಮೇಲೆ ಉಲ್ಟಾ ಹೊಡೆದ ನಿತೀಶ್​ ಕುಮಾರ್​

    ಪಟನಾ: ಸಾಮಾನ್ಯವಾಗಿ ರಾಜಕೀಯ ನಾಯಕರು ಚುನಾವಣಾ ಪ್ರಚಾರಗಳಲ್ಲಿ ಮಾತನಾಡುವಾಗ ಸ್ವಲ್ಪ ಹೆಚ್ಚೆನಿಸುವಷ್ಟೇ ಭಾವುಕವಾಗುವುದು ನಮಗೆಲ್ಲ ಗೊತ್ತಿರುವ ವಿಚಾರ. ಅದೇ ರೀತಿ ಬಿಹಾರ ಚುನಾವಣೆಯಲ್ಲಿ ಭಾವುಕ ಭಾಷಣ ಮಾಡಿದ್ದ ಮುಖ್ಯಮಂತ್ರಿ ನಿತೀಶ್​ ಕುಮಾರ್​ ಇದೀಗ ಉಲ್ಟಾ ಹೊಡೆದಿದ್ದಾರೆ.

    ಇದನ್ನೂ ಓದಿ: ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಹೈಕೋರ್ಟ್​ ಆದೇಶ: 3 ವಾರಗಳಲ್ಲಿ ವೇಳಾಪಟ್ಟಿ ಪ್ರಕಟಿಸಲು ಸೂಚನೆ

    ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ ನಿತೀಶ್​ ಕುಮಾರ್​, ವೇದಿಕೆಯ ಮೇಲೆ ನಿಂತು ಇದು ನನ್ನ ಕೊನೆಯ ಚುನಾವಣೆ ಎಂದು ಹೇಳಿದ್ದರು. ಚುನಾವಣೆ ಮುಗಿದು ಅದರ ಫಲಿತಾಂಶವೂ ಹೊರಬಿದ್ದಿದೆ. ನಿತೀಶ್​ ಕುಮಾರ್​ ಅವರ ಜೆಡಿಯು ಮತ್ತು ಬಿಜೆಪಿ ಪಕ್ಷದ ಮೈತ್ರಿ ಜಯಭೇರಿ ಬಾರಿಸಿದೆ. ಇದೀಗ ತಾವು ರಾಜಕೀಯ ನಿವೃತ್ತಿ ಬಗ್ಗೆ ಮಾತೇ ಆಡಿಲ್ಲ ಎಂದು ನಿತೀಶ್​ ಕುಮಾರ್​ ಹೇಳಿದ್ದಾರೆ.

    ನಾನು ಚುನಾವಣಾ ಪ್ರಚಾರದಲ್ಲಿ ಮಾಡಿದ ಭಾಷಣವನ್ನು ಮಾಧ್ಯಮದವರು ತಪ್ಪಾಗಿ ಗ್ರಹಿಸಿದ್ದಾರೆ. ಒಳ್ಳೆಯದಾಗಿ ಮುಗಿದರೆ ಎಲ್ಲವೂ ಒಳ್ಳೆಯದೇ ಎಂದು ನಾನು ಹೇಳಿದ್ದೆ. ಆದರೆ ಅದನ್ನು ನಾನು ರಾಜಕೀಯ ನಿವೃತ್ತಿ ಘೋಷಿಸಿದ್ದೇನೆ ಎಂದು ಬಿಂಬಿಸಲಾಗಿದೆ ಎಂದು ಅವರು ಹೇಳಿದ್ದಾರೆ.

    ಇದನ್ನೂ ಓದಿ: ಆತಂಕದ ನಡುವೆ ದೀಪಾವಳಿ ಸಂಭ್ರಮ ; ನಿಗಾ ವಹಿಸಲು ಜಿಲ್ಲಾಡಳಿತದಿಮದ ಕಾರ್ಯಪಡೆ ರಚನೆ

    ರಾಜ್ಯದ ಜನತೆ ಬಯಸುವುದಾದರೆ ಇದೇ ಹುಮ್ಮಸ್ಸಿನೊಂದಿಗೆ ಕೆಲಸ ಮುಂದುವರಿಸುವುದಾಗಿ ಅವರು ಹೇಳಿಕೊಂಡಿದ್ದಾರೆ. (ಏಜೆನ್ಸೀಸ್​)

    ಸಿಪಿಐ(ಎಂ)ನ ಪ್ರಧಾನ ಕಾರ್ಯದರ್ಶಿ ಮಗ ಅರೆಸ್ಟ್​; ಅಪ್ಪನಿಗೆ ರಜೆ ಕೊಟ್ಟು ಆರೈಕೆ ಮಾಡುತ್ತಿರುವ ಕೇರಳ ಸರ್ಕಾರ

    ಐಪಿಎಲ್​ನಲ್ಲಿ ಹೀನಾಯ ಸೋಲು ಕಂಡ ಬೆನ್ನಲ್ಲೇ ಕೋಳಿ ಸಾಕಲು ಹೊರಟ ಧೋನಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts