ಮುಂಬೈ: ಕ್ರೂಸ್ ಶಿಪ್ನಲ್ಲಿ ಡ್ರಗ್ಸ್ ಪಾರ್ಟಿ ನಡೆಸಿದ ಆರೋಪದಲ್ಲಿ ಬಂಧಿಸಲ್ಪಟ್ಟಿರುವ ಬಾಲಿವುಡ್ ತಾರೆ ಶಾರುಖ್ ಖಾನ್ರ ಮಗ ಆರ್ಯನ್ ಖಾನ್ನ ಜಾಮೀನು ಅರ್ಜಿಯನ್ನು ಮುಂಬೈನ ವಿಶೇಷ ಎನ್ಡಿಪಿಎಸ್ ಕೋರ್ಟ್ ವಜಾಗೊಳಿಸಿದೆ. ಆರ್ಯನ್ರೊಂದಿಗೆ ಪ್ರಕರಣದ ಇತರ ಇಬ್ಬರು ಆರೋಪಿಗಳಾದ ಅರ್ಬಾಜ್ ಮರ್ಚೆಂಟ್ ಮತ್ತು ಮುನ್ಮುನ್ ಧಮೇಚ ಅವರಿಗೂ ಜಾಮೀನು ಲಭ್ಯವಾಗಿಲ್ಲ.
ಅಕ್ಟೋಬರ್ 2 ನೇ ತಾರೀಕು ಕಾರ್ಡೆಲಿಯ ಕ್ರೂಸ್ ಶಿಪ್ ಮೇಲೆ ನಡೆಸಿದ ದಾಳಿಯ ಹಿನ್ನೆಲೆಯಲ್ಲಿ ಆರ್ಯನ್ ಖಾನ್ಅನ್ನು ವಿಚಾರಣೆ ನಡೆಸಿದ್ದ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್ಸಿಬಿ) ಅಧಿಕಾರಿಗಳು ಅ.3 ರಂದು ಅವನನ್ನು ಬಂಧಿಸಿದ್ದರು. 23 ವರ್ಷ ವಯಸ್ಸಿನ ಆರ್ಯನ್ ಖಾನ್ನೊಂದಿಗೆ ಇತರ 9 ಜನರನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿದೆ.
ಇದನ್ನೂ ಓದಿ: ಐವನ್ ಡಿʼಸೋಜ ಮನೆಗೆ ಬಜರಂಗದಳ ಮುತ್ತಿಗೆ ಯತ್ನ
ಕಳೆದ 12 ದಿನಗಳಿಂದ ಮುಂಬೈನ ಅರ್ಥರ್ ರಸ್ತೆ ಜೈಲಿನಲ್ಲಿರುವ ಖಾನ್ಗೆ ಈ ಮೊದಲು ಮ್ಯಾಜಿಸ್ಟ್ರೇಟ್ ಕೋರ್ಟ್ನಿಂದ ಜಾಮೀನು ಲಭಿಸಿರಲಿಲ್ಲ. ನಂತರ ವಿಶೇಷ ಸೆಷನ್ಸ್ ಕೋರ್ಟ್ನಲ್ಲಿ ಸಲ್ಲಿಕೆಯಾದ ಜಾಮೀನು ಅರ್ಜಿಯ ತೀರ್ಪನ್ನು ಇಂದಿಗೆ ಕಾದಿರಿಸಲಾಗಿತ್ತು. ಇದೀಗ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ವಿ.ವಿ.ಪಾಟೀಲ್ ಜಾಮೀನು ನಿರಾಕರಿಸಿ ಆದೇಶ ಹೊರಡಿಸಿದ್ದಾರೆ.
ಸದ್ಯಕ್ಕೆ ಜೈಲಿನಲ್ಲೇ ಕಾಲ ಕಳೆಯಬೇಕಾಗಿರುವ ಆರ್ಯನ್ ಖಾನ್ರ ವಕೀಲರಿಗೆ ಎನ್ಡಿಪಿಎಸ್ ಕೋರ್ಟ್ನ ಈ ಆದೇಶದ ವಿರುದ್ಧ ಹೈಕೋರ್ಟ್ಗೆ ಅಪೀಲು ಸಲ್ಲಿಸುವ ಅವಕಾಶವಿದೆ. (ಏಜೆನ್ಸೀಸ್)
ಪಾರಿವಾಳ ಬಳಸಿ ಡುಪ್ಲೆಕ್ಸ್ ಮನೆ ದೋಚುತ್ತಿದ್ದ ಚಾಲಾಕಿ ಕಳ್ಳ ಅಂದರ್
ಮಕ್ಕಳೇ, ಸ್ಕೂಲಿಗೆ ರೆಡಿಯಾಗಿ! ಅ.25 ರಿಂದ ಪ್ರಾಥಮಿಕ ಶಾಲೆಗಳೂ ಶುರು