ಅಯೋಧ್ಯೆ: ದೇಶದಲ್ಲಿ ಕರೊನಾ ಸೋಂಕಿನ ಸಂಖ್ಯೆ ಹೆಚ್ಚಳವಾಗಿದೆ. ಸೋಂಕಿತರ ಆರೋಗ್ಯದ ದೃಷ್ಟಿಯಿಂದ ಪಟಾಕಿ ಸಿಡಿಸದಿರುವುದು ಒಳ್ಳೆಯದು. ಈ ವರ್ಷದ ದೀಪಾವಳಿಗೆ ಪಟಾಕಿ ಸಿಡಿಸಬೇಡಿ ಎಂದು ಕೇಂದ್ರ ಸರ್ಕಾರ ಮನವಿ ಮಾಡಿದೆ. ಅದೇ ನಿಟ್ಟಿನಲ್ಲಿ ಹಲವು ರಾಜ್ಯ ಸರ್ಕಾರಗಳು ಕೂಡ ಪಟಾಕಿಗೆ ನಿರ್ಬಂಧ ಹೇರಿವೆ. ಆದರೆ ಈ ರಾಜ್ಯದಲ್ಲಿ ಪಟಾಕಿಗೆ ನಿರ್ಬಂಧವಿಲ್ಲ ಎಂದು ಮುಖ್ಯಮಂತ್ರಿಗಳೇ ಹೇಳಿಬಿಟ್ಟಿದ್ದಾರೆ. ಪಟಾಕಿ ಹೊಡೆದು ಸಂಭ್ರಮಿಸಿ ಎಂದು ಸ್ವತಃ ಮುಖ್ಯಮಂತ್ರಿಯೇ ಕರೆ ನೀಡಿದ್ದಾರೆ.
ಇದನ್ನೂ ಓದಿ: ವಿವಿಧ ಬೇಡಿಕೆ ಈಡೇರಿಕೆಗೆ ಪಟ್ಟು, ಜಿಲ್ಲಾಡಳಿತ ಭವನದ ಎದುರು ಅಂಗನವಾಡಿ ನೌಕರರ ಪ್ರತಿಭಟನೆ
ಮಧ್ಯಪ್ರದೇಶದಲ್ಲಿ ಪಟಾಕಿ ಬ್ಯಾನ್ ಇಲ್ಲ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ. ಚೀನಾದ ಪಟಾಕಿಯನ್ನು ಸಿಡಿಸಬೇಡಿ. ನಾವು ಎಂದಿಗೂ ಸಂತೋಷವನ್ನು ನಿರ್ಬಂಧಿಸಲಾಗದು. ಭಗವಾನ್ ಶ್ರೀ ರಾಮ ಅಯೋಧ್ಯೆಗೆ ಮರಳಿದ್ದಾನೆ. ಹಾಗಾಗಿ ಲಘು ಪಟಾಕಿ ಸಿಡಿಸಿ ಮತ್ತು ಈ ವರ್ಷದ ದೀಪಾವಳಿಯನ್ನು ಆಡಂಭರದಿಂದ ಆಚರಿಸಿ ಎಂದು ಅವರು ಟ್ವಿಟ್ಟರ್ನಲ್ಲಿ ಹೇಳಿದ್ದಾರೆ.
ಇದನ್ನೂ ಓದಿ: ಕಿಚ್ಚನ ‘ಫ್ಯಾಂಟಮ್’ ಚಿತ್ರಕ್ಕೆ ಮತ್ತೊಬ್ಬ ಪ್ರೊಡ್ಯೂಸರ್ ಬಂದ್ರು
ಎಲ್ಲ ರಾಜ್ಯಗಳು ಪಟಾಕಿ ನಿರ್ಬಂಧದ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿವೆ. ಆದರೆ ಮಧ್ಯಪ್ರದೇಶದಲ್ಲಿ ಇನ್ನೂ ಏಕೆ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಜನಸಾಮಾನ್ಯರೊಬ್ಬರು ಟ್ವಿಟ್ಟರ್ನಲ್ಲಿ ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿರುವ ಚೌಹಾಣ್, ಪಟಾಕಿಗೆ ನಿರ್ಬಂಧವಿಲ್ಲ ಎನ್ನುವುದನ್ನು ಸ್ಪಷ್ಟೀಕರಿಸಿದ್ದಾರೆ. (ಏಜೆನ್ಸೀಸ್)
मध्यप्रदेश ख़ुशियों का प्रदेश है। यहाँ पर हम ख़ुशियों पर कभी भी किसी तरह का प्रतिबंध नहीं लगाते। 😊
प्रदेश में पटाखों पर कोई प्रतिबंध नहीं है। हाँ, लेकिन चीनी पटाखों पर प्रतिबंध ज़रूर है।
आप भगवान राम के अयोध्या लौटने की ख़ुशी मनाये, पटाखे जलाये एवं धूम-धाम से दिवाली मनाये! 🙏🏽 https://t.co/VjVt9QClG5
— Shivraj Singh Chouhan (@ChouhanShivraj) November 9, 2020
ಊಟ ಕೊಡದಿದ್ದರೆ ಅರೆಸ್ಟ್ ಮಾಡಿಬಿಡುತ್ತೇನೆ! ಬಯಲಾಯ್ತು ಖತರ್ನಾಕ್ ಕಳ್ಳಿಯ ಅಸಲಿಯತ್ತು