ಬೆಂಗಳೂರು: ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಂಗಳವಾರದಿಂದ ಜಾರಿಗೆ ಬರಲಿರುವ ಲಾಕ್ಡೌನ್ ಕೇವಲ ಒಂದು ವಾರಕ್ಕೆ ಸೀಮಿತವಾಗಿರುತ್ತದೆ. ಅದನ್ನು ವಿಸ್ತಿಸುವ ಪ್ರಸ್ತಾಪ ಸರ್ಕಾರ ಮುಂದಿಲ್ಲ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಕೋವಿಡ್ ಕಾರ್ಯಪಡೆಯ ಅಧಿಕಾರಿಗಳೊಂದಿಗೆ ಸೋಮವಾರ ಚೆರ್ಚೆ ನಡೆಸಿದ ಬಳಿಕ ಅವರು ಈ ಸ್ಪಷ್ಟನೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಒಂದು ವಾರಕ್ಕಿಂತ ಹೆಚ್ಚಿನ ಅವಧಿಗೆ ಲಾಕ್ಡೌನ್ ವಿಸ್ತರಿಸುವುದಿಲ್ಲ. ಆದ್ದರಿಂದ ಜನರು ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಟ್ವೀಟ್ ಮಾಡಿದ್ದಾರೆ.
ಜನರು ವದಂತಿಗಳಿಗೆ ಕಿವಿಗೊಡಬಾರದು. ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಉಭಯ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ಅದನ್ನು ನಿಯಂತ್ರಿಸುವುದು ಸರ್ಕಾರದ ಪ್ರಥಮ ಆದ್ಯತೆಯಾಗಿದೆ. 1 ವಾರದೊಳಗೆ ಎಲ್ಲ ವ್ಯವಸ್ಥೆಗಳನ್ನು ಸರಿಪಡಿಸಿಕೊಳ್ಳಲಾಗುವುದು. ಅದಕ್ಕೆ ಪೂರಕ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
VIDEO: ಮಾನ್ಸೂನ್ನಲ್ಲಿ ಗಂಡುಕಪ್ಪೆಗಳು ಹಳದಿ ಬಣ್ಣಕ್ಕೆ ತಿರುಗುವುದರ ಹಿಂದಿದೆ ಒಂದು ಅಚ್ಚರಿಯ ಕಾರಣ..!