More

    ವಾರಕ್ಕಿಂತ ಹೆಚ್ಚಿನ ಅವಧಿಗೆ ಲಾಕ್​ಡೌನ್​ ಇಲ್ಲ: ಸಿಎಂ ಯಡಿಯೂರಪ್ಪ

    ಬೆಂಗಳೂರು: ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಂಗಳವಾರದಿಂದ ಜಾರಿಗೆ ಬರಲಿರುವ ಲಾಕ್​ಡೌನ್​ ಕೇವಲ ಒಂದು ವಾರಕ್ಕೆ ಸೀಮಿತವಾಗಿರುತ್ತದೆ. ಅದನ್ನು ವಿಸ್ತಿಸುವ ಪ್ರಸ್ತಾಪ ಸರ್ಕಾರ ಮುಂದಿಲ್ಲ ಎಂದು ಸಿಎಂ ಬಿ.ಎಸ್​. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

    ಕೋವಿಡ್​ ಕಾರ್ಯಪಡೆಯ ಅಧಿಕಾರಿಗಳೊಂದಿಗೆ ಸೋಮವಾರ ಚೆರ್ಚೆ ನಡೆಸಿದ ಬಳಿಕ ಅವರು ಈ ಸ್ಪಷ್ಟನೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಒಂದು ವಾರಕ್ಕಿಂತ ಹೆಚ್ಚಿನ ಅವಧಿಗೆ ಲಾಕ್​ಡೌನ್​ ವಿಸ್ತರಿಸುವುದಿಲ್ಲ. ಆದ್ದರಿಂದ ಜನರು ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಟ್ವೀಟ್​ ಮಾಡಿದ್ದಾರೆ.
    ಜನರು ವದಂತಿಗಳಿಗೆ ಕಿವಿಗೊಡಬಾರದು. ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.

    ಉಭಯ ಜಿಲ್ಲೆಗಳಲ್ಲಿ ಕೋವಿಡ್​ ಪ್ರಕರಣಗಳು ಹೆಚ್ಚಾಗುತ್ತಿವೆ. ಅದನ್ನು ನಿಯಂತ್ರಿಸುವುದು ಸರ್ಕಾರದ ಪ್ರಥಮ ಆದ್ಯತೆಯಾಗಿದೆ. 1 ವಾರದೊಳಗೆ ಎಲ್ಲ ವ್ಯವಸ್ಥೆಗಳನ್ನು ಸರಿಪಡಿಸಿಕೊಳ್ಳಲಾಗುವುದು. ಅದಕ್ಕೆ ಪೂರಕ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

    VIDEO: ಮಾನ್ಸೂನ್​​ನಲ್ಲಿ ಗಂಡುಕಪ್ಪೆಗಳು ಹಳದಿ ಬಣ್ಣಕ್ಕೆ ತಿರುಗುವುದರ ಹಿಂದಿದೆ ಒಂದು ಅಚ್ಚರಿಯ ಕಾರಣ..!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts