ಬೆಂಗಳೂರು: ಈ ವರ್ಷ ಶಾಲಾ ಶುಲ್ಕ ಕಟ್ಟದ ಮಕ್ಕಳನ್ನು ಮುಂದಿನ ವರ್ಷಕ್ಕೆ ಪಾಸ್ ಮಾಡಲ್ಲ ಎಂದು ಖಾಸಗಿ ಶಾಲೆಗಳು ಹೇಳುವಂತಿಲ್ಲ ಎಂದು ಸಚಿವ ಸುರೇಶ್ ಕುಮಾರ್ ಎಚ್ಚರಿಸಿದ್ದಾರೆ.
ಶಾಲಾ-ಕಾಲೇಜು ಆರಂಭ ಮಾಡಬೇಕೋ ಬೇಡವೋ ಎಂಬುದರ ಕುರಿತು ಸೋಮವಾರ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಸಚಿವರು ಮಾತನಾಡಿದರು.
ಈ ವರ್ಷ ಶಾಲೆ ಆರಂಭಿಸಲ್ಲ. ರಾಜ್ಯದಲ್ಲಿ ಡಿಸೆಂಬರ್ವರೆಗೂ ಯಾವುದೇ ಶಾಲೆ-ಕಾಲೇಜು ಓಪನ್ ಆಗಲ್ಲ ಎಂದರು. ಶಾಲೆ ಆರಂಭದ ಕುರಿತು ಡಿಸೆಂಬರ್ ಮೂರನೇ ವಾರದಲ್ಲಿ ಮತ್ತೊಂದು ಸಭೆ ನಡೆಯಲಿದೆ. ಪರಿಸ್ಥಿತಿ ನೋಡಿಕೊಂಡು ಮುಂದೆ ನಿರ್ಧಾರ ಮಾಡ್ತೀವಿ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದ ಸಚಿವರು, ಖಾಸಗಿ ಶಾಲೆಗಳ ಶುಲ್ಕ ವಸೂಲಿ ವಿಚಾರದ ಬಗ್ಗೆಯೂ ಮಾತನಾಡಿದರು.
ಸೆಕೆಂಡ್ ಟರ್ಮ್ ಫೀಸ್ ಕಲೆಕ್ಟ್ ಮಾಡಲು ಖಾಸಗಿ ಶಾಲೆಗಳು ಅನುಮತಿ ಕೇಳಿವೆ. ಸರ್ಕಾರ ಇನ್ನೂ ಇನ್ನೂ ಅನುಮತಿ ಕೊಟ್ಟಿಲ್ಲ. ಫೀಸ್ ಕಲೆಕ್ಟ್ ಮಾಡಿದ ತಕ್ಷಣ ಮೊದಲ ಆಧ್ಯತೆ ಶಿಕ್ಷಕರ ವೇತನ ಕೊಡಲು. ಸ್ಕೂಲ್ ಫೀಸ್ ಕಡಿಮೆ ಮಾಡುವ ವಿಚಾರದ ಅರ್ಜಿ ಕೋರ್ಟ್ನಲ್ಲಿದೆ. ಈಗ ಅದರ ಬಗ್ಗೆ ಏನೂ ಹೇಳೋಕೆ ಆಗಲ್ಲ ಎಂದ ಸಚಿವರು, ಶುಲ್ಕ ಕಟ್ಟಿಲ್ಲ ಮಕ್ಕಳನ್ನು ಮುಂದಿನ ವರ್ಷಕ್ಕೆ ಪಾಸ್ ಮಾಡಲ್ಲ ಎಂದು ಖಾಸಗಿ ಶಾಲೆಗಳು ಹೇಳುವಂತಿಲ್ಲ. ಸರ್ಕಾರ ಈ ಬಗ್ಗೆ ಶೀಘ್ರವೇ ಒಂದು ನಿರ್ಧಾರ ಪ್ರಕಟಿಸಲಿದೆ ಎಂದು ವಿವರಿಸಿದರು.
ಮಹಾಮಾರಿ ಕರೊನಾ ಶಿಕ್ಷಣದ ಮೇಲೂ ಪರಿಣಾಮ ಬೀರಿದ್ದು, ದಿನದಿಂದ ದಿನಕ್ಕೆ ಸೋಂಕು ಉಲ್ಬಣಿಸುತ್ತಿದೆ. ಕರೊನಾ ನಿಯಂತ್ರಣಕ್ಕೆ ಬರುವವರೆಗೂ ಮಕ್ಕಳನ್ನು ಶಾಲೆಗೆ ಕಳುಹಿಸಲು ಪಾಲಕರು ಹಿಂದೇಟು ಹಾಕುತ್ತಿದ್ದಾರೆ. ಈ ನಡುವೆ ಆನ್ಲೈನ್ ಮೂಲಕ ಮಕ್ಕಳಿಗೆ ತರಗತಿ ನಡೆಯುತ್ತಿದ್ದು, ಖಾಸಗಿ ಶಾಲೆಗಳಲ್ಲಿ ಈಗಾಗಲೇ ಮೊದಲ ಹಂತದ ಶಾಲಾ ಶುಲ್ಕ ಕಟ್ಟಿಸಿಕೊಳ್ಳಲಾಗಿದೆ.
ರಾಜ್ಯದಲ್ಲಿ ಈ ವರ್ಷ ಶಾಲೆ ಆರಂಭ ಇಲ್ಲ, ಮಹತ್ತರ ನಿರ್ಧಾರ ಕೈಗೊಂಡ ಸರ್ಕಾರ
ಸಿಎಂ ಯಡಿಯೂರಪ್ಪ ಅಧಿಕಾರಾವಧಿ ಪೂರ್ಣಗೊಳ್ಳುತ್ತಾ? ಇಲ್ಲಿದೆ ಕೋಡಿಮಠ ಸ್ವಾಮೀಜಿ ಉತ್ತರ