More

    ಅಕ್ರಮ ಹಣ ವರ್ಗಾವಣೆ ಪ್ರಕರಣ; ತಮ್ಮ ಬಂಧನ ಪ್ರಶ್ನಿಸಿ ಸಂಜಯ್ ಸಿಂಗ್ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಹೈಕೋರ್ಟ್

    ನವದೆಹಲಿ: ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ (ED) ವಶದಲ್ಲಿರುವ ಎಎಪಿ ನಾಯಕ ಸಂಜಯ್​ ಸಿಂಗ್​ ಅವರಿಗೆ ದೆಹಲಿ ಹೈಕೋರ್ಟ್​ನಲ್ಲಿ ಹಿನ್ನಡೆಯಾಗಿದೆ.

    ತಮ್ಮ ಬಂಧನವನ್ನು ಪ್ರಶ್ನಿಸಿ ಸಂಜಯ್​ ಸಿಂಗ್​ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಅರ್ಜಿ ವಿಚಾರಣೆ ನಡೆಸಿದ ಸ್ವರ್ಣಕಾಂತ ಶರ್ಮಾ ಅವರಿದ್ಧ ಏಕಸದಸ್ಯ ಪೀಠವು ಯಾವ ಆಧಾರದ ಮೇಲೆ ನಿಮಗೆ ಜಾಮೀನು ಮಂಜೂರು ಮಾಡಬೇಕು ಎಂದು ಪ್ರಶ್ನಿಸಿ ಅರ್ಜಿಯನ್ನು ವಜಾ ಮಾಡಿದ್ದಾರೆ.

    ಇದನ್ನೂ ಓದಿ: ಏಕದಿನ ವಿಶ್ವಕಪ್​ನಲ್ಲಿ ಟೀಂ ಇಂಡಿಯಾಗೆ ಆಘಾತ; ನ್ಯೂಜಿಲೆಂಡ್ ವಿರುದ್ಧದ ಪಂದ್ಯದಿಂದ ಹಾರ್ದಿಕ ಪಾಂಡ್ಯ ಔಟ್

    ಅಬಕಾರಿ ನೀತಿಯಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ನಾಯಕ್​ ಸಂಜಯ್​ ಸಿಂಗ್​ರನ್ನು ಜಾರಿ ನಿರ್ದೇಶನಾಲಯ ಅಕ್ಟೋಬರ್ 4ರಂದು ವಶಕ್ಕೆ ಪಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮನ್ನು ಯಾವ ಕಾರಣಕ್ಕೆ ಬಂಧಿಸಲಾಗಿದೆ ಎಂದು ಪ್ರಶ್ನಿಸಿ ಸಂಜಯ್ ಸಿಂಗ್ ಕಳೆದ ವಾದ ದೆಹಲಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

    ದೆಹಲಿ ಸರ್ಕಾರ ಜಾರಿಗೆ ತಂದಿದ್ದ ಅಬಕಾರಿ ನೀತಿಯಲ್ಲಿ ವ್ಯಾಪಕ ಅಕ್ರಮ ನಡೆದಿದ್ದು, ಇದರಲ್ಲಿ ಸಂಜಯ್​ ಸಿಂಗ್ ಕೂಡ ಪ್ರಮುಖ ಪಾತ್ರ ವಹಿಸಿದ್ದಾರೆ. ಕೆಲವು ವ್ಯಾಪಾರಿಗಳು ಹಾಗೂ ಮದ್ಯ ತಯಾರಿಕರಿಂದ ಸಿಂಗ್​ ಕಮಿಷನ್ ಪಡೆದಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ ಎಂದು ತನಿಖಾ ಸಂಸ್ಥೆಗಳು ವಾದ ಮಂಡಿಸಿವೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts