ಲಖನೌ: ಅನುಮತಿ ಇಲ್ಲದೇ ಯಾವುದೇ ಧಾರ್ಮಿಕ ಮೆರವಣಿಗೆಗಳು ನಡೆಸುವಂತಿಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೊಗಿ ಆದಿತ್ಯನಾಥ್ ಎಚ್ಚರಿಕೆ ನೀಡಿದ್ದಾರೆ.
ಇದಲ್ಲದೇ ಲೌಡ್ಸ್ಪೀಕರ್ ಬಳಕೆಗೂ ಅನುಮತಿ ಇಲ್ಲ ಎಂದು ಖಡಕ್ ವಾರ್ನಿಂಗ್ ನೀಡಿದ್ದು, ಪೊಲೀಸರು ಜಾಗ್ರತೆ ವಹಿಸುವಂತೆ ಸೂಚಿಸಿದ್ದಾರೆ.
ಈದ್ ಹಾಗೂ ಅಕ್ಷಯ ತೃತೀಯ ಹಬ್ಬಗಳ ಹಿನ್ನಲೆಯಲ್ಲಿ ಹಿಂಸಾಚಾರ ಘಟನೆಗಳು ನಡೆಯುವ ಸಾಧ್ಯತೆ ಇರುವುದರಿಂದ ಈ ನಿರ್ಧಾರ ಕೈಗೊಂಡಿದ್ದಾರೆ.
ಭದ್ರತೆ ಕುರಿತು ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್,ಧಾರ್ಮಿಕ ಕೇಂದ್ರದ ಸ್ಥಳಗಳಿಂದ ಲೌಡ್ಸ್ಪೀಕರ್ ಶಬ್ದ ಬರುವಂತಿಲ್ಲ. ಮೆರವಣಿಗಗಳಿಗೆ ಅನುಮತಿ ತೆಗೆದುಕೊಳ್ಳುವ ಬಗ್ಗೆ ಪರಿಶೀಲಿಸಬೇಕು ಎಂದಿದ್ದಾರೆ.